ಬೆಂಗಳೂರಿನ ಹಲವು ಮಾಲ್ ಹಾಗೂ ಅಂಗಡಿಗಳಲ್ಲಿ ಕನ್ನಡ ಫಲಕಗಳಿಲ್ಲ, ಕನ್ನಡ ಫಲಕಗಳು ಕಡ್ಡಾಯವಾಗಬೇಕು ಎಂದು ಇತ್ತೀಚೆಗಷ್ಟೇ ಕನ್ನಡ ಪರ ಸಂಘಟನೆಗಳು ಕನ್ನಡ ಜಾಗೃತಿ ಅಭಿಯಾನದಡಿಯಲ್ಲಿ ವಿವಿಧ ಮಾಲ್ ಹಾಗೂ ಅಂಗಡಿಗಳಿಗೆ ನುಗ್ಗಿ ಕನ್ನಡವಿಲ್ಲದ ಬೋರ್ಡ್ಗಳನ್ನು ಒಡೆದು ಹಾಕಿದ್ದರು.
ಅದರಲ್ಲಿಯೂ ಮಾಲ್ ಆಫ್ ಏಷ್ಯಾದಲ್ಲಿ ಕನ್ನಡವೇ ಇಲ್ಲದ ಕಾರಣ ಈ ಮಾಲ್ ಕನ್ನಡ ಪರ ಹೋರಾಟಗಾರರ ಟಾರ್ಗೆಟ್ ಅಗಿತ್ತು. ಹೀಗಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಇಂದಿನಿಂದ ( ಡಿಸೆಂಬರ್ 31 ) ಜನವರಿ 15ರವರೆಗೆ ಈ ಮಾಲ್ ಬಂದ್ ಮಾಡಲು ಮಾಡಿ ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದರು. ಮಾಲ್ ಸುತ್ತಮುತ್ತ 144 ಜಾರಿ ಮಾಡಿ ನಿಷೇದಾಜ್ಞೆಯನ್ನು ಹೇರಲಾಗಿತ್ತು. ಇನ್ನು ಮಾಲ್ ಮುಂದೆ ʼಮಾಲ್ ಕ್ಲೋಸ್ಡ್ʼ ಎಂಬ ಫಲಕ ಇಟ್ಟು ಬಾಗಿಲು ಬಂದ್ ಮಾಡಲಾಗಿತ್ತು.
ಈ ಕುರಿತು ಇದೀಗ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ರಿಟ್ ಅರ್ಜಿ ಸಲ್ಲಿಸಿ ನಿರ್ಬಂಧವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…