ರಾಜ್ಯ

ಅಶಿಸ್ತು ಮರುಕಳಿಸಿದರೆ ವಜಾ: ಸ್ಪೀಕರ್ ಯು. ಟಿ ಖಾದರ್

ಮಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಲಾಗಿದೆ. ಮುಂದೆಯೂ ಇದೇ ರೀತಿ ಮಾಡಿದ್ದಲ್ಲಿ ಅವರನ್ನು ವಜಾ ಮಾಡಲಾಗುತ್ತದೆ. ಬಳಿಕ ಕೋರ್ಟ್‌ನಲ್ಲಿ ನಿರ್ಧಾರವಾಗಲಿ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಖಡಕ್ ಎಚ್ಚರಿಕೆ ನೀಡಿದರು.

ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಮಾತನಾಡಿದ ಅವರು, ಸದನದ ಗೌರವ ಉಳಿಸಬೇಕಾದರೆ ಇಂತಹ ಕ್ರಮ ಕೈಗೊಳ್ಳಬೇಕಾಗುತ್ತದೆ. ಸ್ಪೀಕರ್ ಸದನದ ಸುಪ್ರೀಂ ಪವರ್. ಡಿಫಮೇಷನ್ ಕಾಯ್ದೆ ಬಲವಾಗಿದೆ. ಆದರೆ ಸ್ಪೀಕರ್ ಸ್ಥಾನದಲ್ಲಿ ಹಿಂದೆ ಕುಳಿತವರು ಬಲವಾಗಿದ್ದರೆ ಎಲ್ಲವೂ ಸರಿಯಾಗುತ್ತದೆ‌. ಹಿಂದೆ ಇಂತಹ ಘಟನೆಗಳು ನಡೆದಾಗ ಅಂದಿನ ಸ್ಪೀಕರ್ ಸ್ಥಾನದಲ್ಲಿದ್ದವರು ಸರಿಯಾಗಿ ಕ್ರಮ ಕೈಗೊಳ್ಳದಿದ್ದ ಕಾರಣ, ಮತ್ತೆ ಇಂತಹ ಘಟನೆಗಳು ಮರುಕಳಿಸುವಂತಾಗಿದೆ. ಅವರಿಗೆ ಧೈರ್ಯ ಇರಲಿಲ್ಲ ಹಾಗಾಗಿ ಆರು ತಿಂಗಳ ಅಮಾನತು ಮಾಡಿಲ್ಲ. ನನಗೆ ಧೈರ್ಯ ಇದೆ ನಾನು ಮಾಡಿದ್ದೇನೆ ಎಂದು ಹೇಳಿದರು.

ಧನ ವಿನಿಯೋಗ ಬಿಲ್ ಪಾಸ್ ಆಗುವಾಗ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ. ಅಂದಿನ ಘಟನೆ ಇಡೀ ರಾಜ್ಯದ ಜನತೆಗೆ ಅಸಹ್ಯ ಮೂಡಿಸಿದೆ. ಸಭಾಧ್ಯಕ್ಷ ಪೀಠದ ಗೌರವ ಉಳಿಸಿಕೊಳ್ಳಲು ಮಿತ್ರ ಶಾಸಕರನ್ನು ಆರು ತಿಂಗಳವರೆಗೆ ಅಮಾನತು ಮಾಡಿದ್ದೇನೆ. ಯಾರೂ ಅದನ್ನು ಶಿಕ್ಷೆಯೆಂದು ಪರಿಗಣಿಸುವುದು ಬೇಡ. ಉತ್ತಮವಾದ ಜನಪ್ರತಿನಿಧಿಯಾಗಲು ಕೈಗೊಂಡ ಕ್ರಮ ಇದು ಎಂದರು.

ಈ ಗಲಾಟೆಯ ಗೊಂದಲದಲ್ಲಿ ಧನ ವಿನಿಯೋಗ ಬಿಲ್ ಪಾಸ್ ಮಾಡದಿದ್ದಲ್ಲಿ ಯಾವ ಅಭಿವೃದ್ಧಿಯೂ ಆಗುವುದಿಲ್ಲ. ಬೇರೆ ಬಿಲ್ ರೀತಿಯಲ್ಲಿ ಅದನ್ನು ಮುಂದೆ ಹಾಕಲೂ ಸಾಧ್ಯವಿಲ್ಲ. ಆದರೆ, ಅವರಿಗೆ ಫೈನಾನ್ಸ್ ಬಿಲ್ ಪಾಸ್ ಆಗುವಾಗಲೇ ಗದ್ದಲ ಎಬ್ಬಿಸಿ, ನಿಲ್ಲಿಸುವ ಉದ್ದೇಶವಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ ಎಂದು ಸ್ಪೀಕರ್ ಖಾದರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

2 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

3 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

4 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

4 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

4 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

5 hours ago