ರಾಜ್ಯ

ಅಶಿಸ್ತು ಮರುಕಳಿಸಿದರೆ ವಜಾ: ಸ್ಪೀಕರ್ ಯು. ಟಿ ಖಾದರ್

ಮಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಲಾಗಿದೆ. ಮುಂದೆಯೂ ಇದೇ ರೀತಿ ಮಾಡಿದ್ದಲ್ಲಿ ಅವರನ್ನು ವಜಾ ಮಾಡಲಾಗುತ್ತದೆ. ಬಳಿಕ ಕೋರ್ಟ್‌ನಲ್ಲಿ ನಿರ್ಧಾರವಾಗಲಿ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಖಡಕ್ ಎಚ್ಚರಿಕೆ ನೀಡಿದರು.

ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಮಾತನಾಡಿದ ಅವರು, ಸದನದ ಗೌರವ ಉಳಿಸಬೇಕಾದರೆ ಇಂತಹ ಕ್ರಮ ಕೈಗೊಳ್ಳಬೇಕಾಗುತ್ತದೆ. ಸ್ಪೀಕರ್ ಸದನದ ಸುಪ್ರೀಂ ಪವರ್. ಡಿಫಮೇಷನ್ ಕಾಯ್ದೆ ಬಲವಾಗಿದೆ. ಆದರೆ ಸ್ಪೀಕರ್ ಸ್ಥಾನದಲ್ಲಿ ಹಿಂದೆ ಕುಳಿತವರು ಬಲವಾಗಿದ್ದರೆ ಎಲ್ಲವೂ ಸರಿಯಾಗುತ್ತದೆ‌. ಹಿಂದೆ ಇಂತಹ ಘಟನೆಗಳು ನಡೆದಾಗ ಅಂದಿನ ಸ್ಪೀಕರ್ ಸ್ಥಾನದಲ್ಲಿದ್ದವರು ಸರಿಯಾಗಿ ಕ್ರಮ ಕೈಗೊಳ್ಳದಿದ್ದ ಕಾರಣ, ಮತ್ತೆ ಇಂತಹ ಘಟನೆಗಳು ಮರುಕಳಿಸುವಂತಾಗಿದೆ. ಅವರಿಗೆ ಧೈರ್ಯ ಇರಲಿಲ್ಲ ಹಾಗಾಗಿ ಆರು ತಿಂಗಳ ಅಮಾನತು ಮಾಡಿಲ್ಲ. ನನಗೆ ಧೈರ್ಯ ಇದೆ ನಾನು ಮಾಡಿದ್ದೇನೆ ಎಂದು ಹೇಳಿದರು.

ಧನ ವಿನಿಯೋಗ ಬಿಲ್ ಪಾಸ್ ಆಗುವಾಗ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ. ಅಂದಿನ ಘಟನೆ ಇಡೀ ರಾಜ್ಯದ ಜನತೆಗೆ ಅಸಹ್ಯ ಮೂಡಿಸಿದೆ. ಸಭಾಧ್ಯಕ್ಷ ಪೀಠದ ಗೌರವ ಉಳಿಸಿಕೊಳ್ಳಲು ಮಿತ್ರ ಶಾಸಕರನ್ನು ಆರು ತಿಂಗಳವರೆಗೆ ಅಮಾನತು ಮಾಡಿದ್ದೇನೆ. ಯಾರೂ ಅದನ್ನು ಶಿಕ್ಷೆಯೆಂದು ಪರಿಗಣಿಸುವುದು ಬೇಡ. ಉತ್ತಮವಾದ ಜನಪ್ರತಿನಿಧಿಯಾಗಲು ಕೈಗೊಂಡ ಕ್ರಮ ಇದು ಎಂದರು.

ಈ ಗಲಾಟೆಯ ಗೊಂದಲದಲ್ಲಿ ಧನ ವಿನಿಯೋಗ ಬಿಲ್ ಪಾಸ್ ಮಾಡದಿದ್ದಲ್ಲಿ ಯಾವ ಅಭಿವೃದ್ಧಿಯೂ ಆಗುವುದಿಲ್ಲ. ಬೇರೆ ಬಿಲ್ ರೀತಿಯಲ್ಲಿ ಅದನ್ನು ಮುಂದೆ ಹಾಕಲೂ ಸಾಧ್ಯವಿಲ್ಲ. ಆದರೆ, ಅವರಿಗೆ ಫೈನಾನ್ಸ್ ಬಿಲ್ ಪಾಸ್ ಆಗುವಾಗಲೇ ಗದ್ದಲ ಎಬ್ಬಿಸಿ, ನಿಲ್ಲಿಸುವ ಉದ್ದೇಶವಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ ಎಂದು ಸ್ಪೀಕರ್ ಖಾದರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

2 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

2 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

3 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

3 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

4 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

4 hours ago