ರಾಜ್ಯ

ಅಶಿಸ್ತು ಮರುಕಳಿಸಿದರೆ ವಜಾ: ಸ್ಪೀಕರ್ ಯು. ಟಿ ಖಾದರ್

ಮಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಲಾಗಿದೆ. ಮುಂದೆಯೂ ಇದೇ ರೀತಿ ಮಾಡಿದ್ದಲ್ಲಿ ಅವರನ್ನು ವಜಾ ಮಾಡಲಾಗುತ್ತದೆ. ಬಳಿಕ ಕೋರ್ಟ್‌ನಲ್ಲಿ ನಿರ್ಧಾರವಾಗಲಿ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಖಡಕ್ ಎಚ್ಚರಿಕೆ ನೀಡಿದರು.

ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಮಾತನಾಡಿದ ಅವರು, ಸದನದ ಗೌರವ ಉಳಿಸಬೇಕಾದರೆ ಇಂತಹ ಕ್ರಮ ಕೈಗೊಳ್ಳಬೇಕಾಗುತ್ತದೆ. ಸ್ಪೀಕರ್ ಸದನದ ಸುಪ್ರೀಂ ಪವರ್. ಡಿಫಮೇಷನ್ ಕಾಯ್ದೆ ಬಲವಾಗಿದೆ. ಆದರೆ ಸ್ಪೀಕರ್ ಸ್ಥಾನದಲ್ಲಿ ಹಿಂದೆ ಕುಳಿತವರು ಬಲವಾಗಿದ್ದರೆ ಎಲ್ಲವೂ ಸರಿಯಾಗುತ್ತದೆ‌. ಹಿಂದೆ ಇಂತಹ ಘಟನೆಗಳು ನಡೆದಾಗ ಅಂದಿನ ಸ್ಪೀಕರ್ ಸ್ಥಾನದಲ್ಲಿದ್ದವರು ಸರಿಯಾಗಿ ಕ್ರಮ ಕೈಗೊಳ್ಳದಿದ್ದ ಕಾರಣ, ಮತ್ತೆ ಇಂತಹ ಘಟನೆಗಳು ಮರುಕಳಿಸುವಂತಾಗಿದೆ. ಅವರಿಗೆ ಧೈರ್ಯ ಇರಲಿಲ್ಲ ಹಾಗಾಗಿ ಆರು ತಿಂಗಳ ಅಮಾನತು ಮಾಡಿಲ್ಲ. ನನಗೆ ಧೈರ್ಯ ಇದೆ ನಾನು ಮಾಡಿದ್ದೇನೆ ಎಂದು ಹೇಳಿದರು.

ಧನ ವಿನಿಯೋಗ ಬಿಲ್ ಪಾಸ್ ಆಗುವಾಗ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ. ಅಂದಿನ ಘಟನೆ ಇಡೀ ರಾಜ್ಯದ ಜನತೆಗೆ ಅಸಹ್ಯ ಮೂಡಿಸಿದೆ. ಸಭಾಧ್ಯಕ್ಷ ಪೀಠದ ಗೌರವ ಉಳಿಸಿಕೊಳ್ಳಲು ಮಿತ್ರ ಶಾಸಕರನ್ನು ಆರು ತಿಂಗಳವರೆಗೆ ಅಮಾನತು ಮಾಡಿದ್ದೇನೆ. ಯಾರೂ ಅದನ್ನು ಶಿಕ್ಷೆಯೆಂದು ಪರಿಗಣಿಸುವುದು ಬೇಡ. ಉತ್ತಮವಾದ ಜನಪ್ರತಿನಿಧಿಯಾಗಲು ಕೈಗೊಂಡ ಕ್ರಮ ಇದು ಎಂದರು.

ಈ ಗಲಾಟೆಯ ಗೊಂದಲದಲ್ಲಿ ಧನ ವಿನಿಯೋಗ ಬಿಲ್ ಪಾಸ್ ಮಾಡದಿದ್ದಲ್ಲಿ ಯಾವ ಅಭಿವೃದ್ಧಿಯೂ ಆಗುವುದಿಲ್ಲ. ಬೇರೆ ಬಿಲ್ ರೀತಿಯಲ್ಲಿ ಅದನ್ನು ಮುಂದೆ ಹಾಕಲೂ ಸಾಧ್ಯವಿಲ್ಲ. ಆದರೆ, ಅವರಿಗೆ ಫೈನಾನ್ಸ್ ಬಿಲ್ ಪಾಸ್ ಆಗುವಾಗಲೇ ಗದ್ದಲ ಎಬ್ಬಿಸಿ, ನಿಲ್ಲಿಸುವ ಉದ್ದೇಶವಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ ಎಂದು ಸ್ಪೀಕರ್ ಖಾದರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

4 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

4 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

4 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

5 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

5 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

6 hours ago