ಮಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಲಾಗಿದೆ. ಮುಂದೆಯೂ ಇದೇ ರೀತಿ ಮಾಡಿದ್ದಲ್ಲಿ ಅವರನ್ನು ವಜಾ ಮಾಡಲಾಗುತ್ತದೆ. ಬಳಿಕ ಕೋರ್ಟ್ನಲ್ಲಿ ನಿರ್ಧಾರವಾಗಲಿ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಖಡಕ್ ಎಚ್ಚರಿಕೆ ನೀಡಿದರು.
ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಮಾತನಾಡಿದ ಅವರು, ಸದನದ ಗೌರವ ಉಳಿಸಬೇಕಾದರೆ ಇಂತಹ ಕ್ರಮ ಕೈಗೊಳ್ಳಬೇಕಾಗುತ್ತದೆ. ಸ್ಪೀಕರ್ ಸದನದ ಸುಪ್ರೀಂ ಪವರ್. ಡಿಫಮೇಷನ್ ಕಾಯ್ದೆ ಬಲವಾಗಿದೆ. ಆದರೆ ಸ್ಪೀಕರ್ ಸ್ಥಾನದಲ್ಲಿ ಹಿಂದೆ ಕುಳಿತವರು ಬಲವಾಗಿದ್ದರೆ ಎಲ್ಲವೂ ಸರಿಯಾಗುತ್ತದೆ. ಹಿಂದೆ ಇಂತಹ ಘಟನೆಗಳು ನಡೆದಾಗ ಅಂದಿನ ಸ್ಪೀಕರ್ ಸ್ಥಾನದಲ್ಲಿದ್ದವರು ಸರಿಯಾಗಿ ಕ್ರಮ ಕೈಗೊಳ್ಳದಿದ್ದ ಕಾರಣ, ಮತ್ತೆ ಇಂತಹ ಘಟನೆಗಳು ಮರುಕಳಿಸುವಂತಾಗಿದೆ. ಅವರಿಗೆ ಧೈರ್ಯ ಇರಲಿಲ್ಲ ಹಾಗಾಗಿ ಆರು ತಿಂಗಳ ಅಮಾನತು ಮಾಡಿಲ್ಲ. ನನಗೆ ಧೈರ್ಯ ಇದೆ ನಾನು ಮಾಡಿದ್ದೇನೆ ಎಂದು ಹೇಳಿದರು.
ಧನ ವಿನಿಯೋಗ ಬಿಲ್ ಪಾಸ್ ಆಗುವಾಗ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ. ಅಂದಿನ ಘಟನೆ ಇಡೀ ರಾಜ್ಯದ ಜನತೆಗೆ ಅಸಹ್ಯ ಮೂಡಿಸಿದೆ. ಸಭಾಧ್ಯಕ್ಷ ಪೀಠದ ಗೌರವ ಉಳಿಸಿಕೊಳ್ಳಲು ಮಿತ್ರ ಶಾಸಕರನ್ನು ಆರು ತಿಂಗಳವರೆಗೆ ಅಮಾನತು ಮಾಡಿದ್ದೇನೆ. ಯಾರೂ ಅದನ್ನು ಶಿಕ್ಷೆಯೆಂದು ಪರಿಗಣಿಸುವುದು ಬೇಡ. ಉತ್ತಮವಾದ ಜನಪ್ರತಿನಿಧಿಯಾಗಲು ಕೈಗೊಂಡ ಕ್ರಮ ಇದು ಎಂದರು.
ಈ ಗಲಾಟೆಯ ಗೊಂದಲದಲ್ಲಿ ಧನ ವಿನಿಯೋಗ ಬಿಲ್ ಪಾಸ್ ಮಾಡದಿದ್ದಲ್ಲಿ ಯಾವ ಅಭಿವೃದ್ಧಿಯೂ ಆಗುವುದಿಲ್ಲ. ಬೇರೆ ಬಿಲ್ ರೀತಿಯಲ್ಲಿ ಅದನ್ನು ಮುಂದೆ ಹಾಕಲೂ ಸಾಧ್ಯವಿಲ್ಲ. ಆದರೆ, ಅವರಿಗೆ ಫೈನಾನ್ಸ್ ಬಿಲ್ ಪಾಸ್ ಆಗುವಾಗಲೇ ಗದ್ದಲ ಎಬ್ಬಿಸಿ, ನಿಲ್ಲಿಸುವ ಉದ್ದೇಶವಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ ಎಂದು ಸ್ಪೀಕರ್ ಖಾದರ್ ಹೇಳಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…