ರಾಜ್ಯ

ಅಶಿಸ್ತು ಮರುಕಳಿಸಿದರೆ ವಜಾ: ಸ್ಪೀಕರ್ ಯು. ಟಿ ಖಾದರ್

ಮಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಲಾಗಿದೆ. ಮುಂದೆಯೂ ಇದೇ ರೀತಿ ಮಾಡಿದ್ದಲ್ಲಿ ಅವರನ್ನು ವಜಾ ಮಾಡಲಾಗುತ್ತದೆ. ಬಳಿಕ ಕೋರ್ಟ್‌ನಲ್ಲಿ ನಿರ್ಧಾರವಾಗಲಿ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಖಡಕ್ ಎಚ್ಚರಿಕೆ ನೀಡಿದರು.

ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಮಾತನಾಡಿದ ಅವರು, ಸದನದ ಗೌರವ ಉಳಿಸಬೇಕಾದರೆ ಇಂತಹ ಕ್ರಮ ಕೈಗೊಳ್ಳಬೇಕಾಗುತ್ತದೆ. ಸ್ಪೀಕರ್ ಸದನದ ಸುಪ್ರೀಂ ಪವರ್. ಡಿಫಮೇಷನ್ ಕಾಯ್ದೆ ಬಲವಾಗಿದೆ. ಆದರೆ ಸ್ಪೀಕರ್ ಸ್ಥಾನದಲ್ಲಿ ಹಿಂದೆ ಕುಳಿತವರು ಬಲವಾಗಿದ್ದರೆ ಎಲ್ಲವೂ ಸರಿಯಾಗುತ್ತದೆ‌. ಹಿಂದೆ ಇಂತಹ ಘಟನೆಗಳು ನಡೆದಾಗ ಅಂದಿನ ಸ್ಪೀಕರ್ ಸ್ಥಾನದಲ್ಲಿದ್ದವರು ಸರಿಯಾಗಿ ಕ್ರಮ ಕೈಗೊಳ್ಳದಿದ್ದ ಕಾರಣ, ಮತ್ತೆ ಇಂತಹ ಘಟನೆಗಳು ಮರುಕಳಿಸುವಂತಾಗಿದೆ. ಅವರಿಗೆ ಧೈರ್ಯ ಇರಲಿಲ್ಲ ಹಾಗಾಗಿ ಆರು ತಿಂಗಳ ಅಮಾನತು ಮಾಡಿಲ್ಲ. ನನಗೆ ಧೈರ್ಯ ಇದೆ ನಾನು ಮಾಡಿದ್ದೇನೆ ಎಂದು ಹೇಳಿದರು.

ಧನ ವಿನಿಯೋಗ ಬಿಲ್ ಪಾಸ್ ಆಗುವಾಗ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆ. ಅಂದಿನ ಘಟನೆ ಇಡೀ ರಾಜ್ಯದ ಜನತೆಗೆ ಅಸಹ್ಯ ಮೂಡಿಸಿದೆ. ಸಭಾಧ್ಯಕ್ಷ ಪೀಠದ ಗೌರವ ಉಳಿಸಿಕೊಳ್ಳಲು ಮಿತ್ರ ಶಾಸಕರನ್ನು ಆರು ತಿಂಗಳವರೆಗೆ ಅಮಾನತು ಮಾಡಿದ್ದೇನೆ. ಯಾರೂ ಅದನ್ನು ಶಿಕ್ಷೆಯೆಂದು ಪರಿಗಣಿಸುವುದು ಬೇಡ. ಉತ್ತಮವಾದ ಜನಪ್ರತಿನಿಧಿಯಾಗಲು ಕೈಗೊಂಡ ಕ್ರಮ ಇದು ಎಂದರು.

ಈ ಗಲಾಟೆಯ ಗೊಂದಲದಲ್ಲಿ ಧನ ವಿನಿಯೋಗ ಬಿಲ್ ಪಾಸ್ ಮಾಡದಿದ್ದಲ್ಲಿ ಯಾವ ಅಭಿವೃದ್ಧಿಯೂ ಆಗುವುದಿಲ್ಲ. ಬೇರೆ ಬಿಲ್ ರೀತಿಯಲ್ಲಿ ಅದನ್ನು ಮುಂದೆ ಹಾಕಲೂ ಸಾಧ್ಯವಿಲ್ಲ. ಆದರೆ, ಅವರಿಗೆ ಫೈನಾನ್ಸ್ ಬಿಲ್ ಪಾಸ್ ಆಗುವಾಗಲೇ ಗದ್ದಲ ಎಬ್ಬಿಸಿ, ನಿಲ್ಲಿಸುವ ಉದ್ದೇಶವಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ ಎಂದು ಸ್ಪೀಕರ್ ಖಾದರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago