ರಾಜ್ಯ

ಸ್ಪೀಕರ್‌ ಯು.ಟಿ.ಖಾದರ್‌ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ

ಬೆಂಗಳೂರು: ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಅವರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇತ್ತೀಚೆಗೆ ಖರೀದಿ ಮಾಡಿರುವ ಸಾಮಾಗ್ರಿಗಳ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ ಮಾಡಿದ್ದಾರೆ.

ಯು.ಟಿ.ಖಾದರ್‌ ಇತ್ತೀಚೆಗೆ ಲೂಟಿ ಖಾದರ್‌ ಆಗಿದ್ದಾರೆ. ಅವರ ಘನತೆಗೆ, ಸ್ಥಾನಮಾನಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ಪ್ರತಿಯೊಂದು ನಡವಳಿಕೆಯೂ ಸಂಶಯಕ್ಕೆ ಎಡೆ ಮಾಡಿಕೊಡುತ್ತಿದ್ದು, ಇದರ ಬಗ್ಗೆ ತನಿಖೆಯ ಅಗತ್ಯವಿದೆ. ವಿಧಾನಸಭೆಯ ಇತಿಹಾಸದಲ್ಲೇ ಸ್ಪೀಕರ್‌ ಮೇಲೆ ಇಂತಹ ಆರೋಪಗಳು ಮೊದಲ ಬಾರಿಗೆ ಬಂದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿ: ಎಸ್‌ಐಆರ್ ಜಾರಿ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್‌ ಆಕ್ರೋಶ

ಕರ್ನಾಟಕ ವಿಧಾನಸಭೆಗೆ ತನ್ನದೇ ಆದ ಗೌರವ ಇದೆ. ಆದರೆ ಖಾದರ್‌ ಅವರು ತಮ್ಮ ಪೀಠದ ಗೌರವವನ್ನು ಕಾಪಾಡುತ್ತಿಲ್ಲ. ಅವರು ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಇದು ಹಲವು ಶಾಸಕರ ಅಭಿಮತವೂ ಹೌದು! ಇದಲ್ಲದೇ ಅವರ ಆಡಳಿತ ಸುಧಾರಣೆ ಹೆಸರಿನಲ್ಲಿ ಮಾಡುತ್ತಿರುವ ಕಾರ್ಯವೈಖರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.

ವಿಧಾನಸೌಧದ ಸಭಾಂಗಣದ ಬಾಗಿಲಿಗೆ ರೋಸ್‌‍ವುಡ್‌ ಹಾಕಿದ್ದು, ಹೊಸ ಟಿವಿ ಖರೀದಿ, ಶಾಸಕರ ಮಸಾಜ್‌ ಛೇರ್‌, ಗಂಡಬೇರುಂಢ ಗಡಿಯಾರ, ಊಟ ಉಪಹಾರ. ಹೀಗೆ ಹಲವು ವಿಚಾರಗಳು ಭ್ರಷ್ಟಾಚಾರದ ಆರೋಪಕ್ಕೆ ಪುಷ್ಟಿ ನೀಡಿವೆ ಎಂದರು.

ಸಭಾಧ್ಯಕ್ಷರ ಭ್ರಷ್ಟಾಚಾರದ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ಪತ್ರ ಮೂಲಕ ತರುತ್ತೇನೆ. ಯು.ಟಿ.ಖಾದರ್‌ ಈಗ ಲೂಟಿ ಖಾದರ್‌ ಎಂಬ ಹಂತಕ್ಕೆ ತಲುಪಿದ್ದಾರೆ ಎಂದು ಜನರೇ ಆರೋಪ ಮಾಡುತ್ತಿದ್ದಾರೆ. ಇವೆಲ್ಲದಕ್ಕೂ ಖಾದರ್‌ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

24 mins ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

46 mins ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

2 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

7 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

7 hours ago