ರಾಜ್ಯ

ಸ್ಪೀಕರ್‌ ಯು.ಟಿ.ಖಾದರ್‌ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ

ಬೆಂಗಳೂರು: ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಅವರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇತ್ತೀಚೆಗೆ ಖರೀದಿ ಮಾಡಿರುವ ಸಾಮಾಗ್ರಿಗಳ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ ಮಾಡಿದ್ದಾರೆ.

ಯು.ಟಿ.ಖಾದರ್‌ ಇತ್ತೀಚೆಗೆ ಲೂಟಿ ಖಾದರ್‌ ಆಗಿದ್ದಾರೆ. ಅವರ ಘನತೆಗೆ, ಸ್ಥಾನಮಾನಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ಪ್ರತಿಯೊಂದು ನಡವಳಿಕೆಯೂ ಸಂಶಯಕ್ಕೆ ಎಡೆ ಮಾಡಿಕೊಡುತ್ತಿದ್ದು, ಇದರ ಬಗ್ಗೆ ತನಿಖೆಯ ಅಗತ್ಯವಿದೆ. ವಿಧಾನಸಭೆಯ ಇತಿಹಾಸದಲ್ಲೇ ಸ್ಪೀಕರ್‌ ಮೇಲೆ ಇಂತಹ ಆರೋಪಗಳು ಮೊದಲ ಬಾರಿಗೆ ಬಂದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿ: ಎಸ್‌ಐಆರ್ ಜಾರಿ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್‌ ಆಕ್ರೋಶ

ಕರ್ನಾಟಕ ವಿಧಾನಸಭೆಗೆ ತನ್ನದೇ ಆದ ಗೌರವ ಇದೆ. ಆದರೆ ಖಾದರ್‌ ಅವರು ತಮ್ಮ ಪೀಠದ ಗೌರವವನ್ನು ಕಾಪಾಡುತ್ತಿಲ್ಲ. ಅವರು ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಇದು ಹಲವು ಶಾಸಕರ ಅಭಿಮತವೂ ಹೌದು! ಇದಲ್ಲದೇ ಅವರ ಆಡಳಿತ ಸುಧಾರಣೆ ಹೆಸರಿನಲ್ಲಿ ಮಾಡುತ್ತಿರುವ ಕಾರ್ಯವೈಖರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು.

ವಿಧಾನಸೌಧದ ಸಭಾಂಗಣದ ಬಾಗಿಲಿಗೆ ರೋಸ್‌‍ವುಡ್‌ ಹಾಕಿದ್ದು, ಹೊಸ ಟಿವಿ ಖರೀದಿ, ಶಾಸಕರ ಮಸಾಜ್‌ ಛೇರ್‌, ಗಂಡಬೇರುಂಢ ಗಡಿಯಾರ, ಊಟ ಉಪಹಾರ. ಹೀಗೆ ಹಲವು ವಿಚಾರಗಳು ಭ್ರಷ್ಟಾಚಾರದ ಆರೋಪಕ್ಕೆ ಪುಷ್ಟಿ ನೀಡಿವೆ ಎಂದರು.

ಸಭಾಧ್ಯಕ್ಷರ ಭ್ರಷ್ಟಾಚಾರದ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ಪತ್ರ ಮೂಲಕ ತರುತ್ತೇನೆ. ಯು.ಟಿ.ಖಾದರ್‌ ಈಗ ಲೂಟಿ ಖಾದರ್‌ ಎಂಬ ಹಂತಕ್ಕೆ ತಲುಪಿದ್ದಾರೆ ಎಂದು ಜನರೇ ಆರೋಪ ಮಾಡುತ್ತಿದ್ದಾರೆ. ಇವೆಲ್ಲದಕ್ಕೂ ಖಾದರ್‌ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

38 mins ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

40 mins ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

43 mins ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

4 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

4 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

4 hours ago