ರಾಜ್ಯ

ಕಲ್ಬುರ್ಗಿ-ಗೌರಿ ಹತ್ಯೆ ತನಿಖೆಗೆ ವಿಶೇಷ ಕೋರ್ಟ್‌: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಸಾಹಿತಿ ಎಂ.ಎಂ.ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತವಾಗಿಸಲು ರಾಜ್ಯದಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸಾಹಿತಿ ಎಂ.ಎಂ.ಕಲ್ಬರ್ಗಿ ಅವರನ್ನು 2015ರ ಆಗಸ್ಟ್‌ ತಿಂಗಳಲ್ಲಿ ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆ ಮಾಡಲಾಗಿತ್ತು. ಹಾಗೂ ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು 2017 ಸೆಪ್ಟೆಂಬರ್‌ ತಿಂಗಳಲ್ಲಿ ಬೆಂಗಳೂರಿನ ತಮ್ಮ ನಿವಾಸದ ಬಳಿ ಕೊಲೆ ಮಾಡಲಾಗಿತ್ತು.

ಎರಡೂ ಕೃತ್ಯಗಳನ್ನೆಸಗಿದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭವಾಗಿದ್ದು, ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್‌ ಸರ್ಕಾರಕ್ಕೆ ಮನವಿ ಮಾಡಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಅಗತ್ಯ ಕ್ರಮವಹಿಸಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago