ರಾಜ್ಯ

ಕೃತಕ ಬಣ್ಣ, ರಾಸಾಯನಿಕ ಬಳಸುವ ಹೋಟೆಲ್​ಗಳಲ್ಲಿ ಆಹಾರ ಇಲಾಖೆಯಿಂದ ವಿಶೇಷ ಕಾರ್ಯಾಚರಣೆ

ಬೆಂಗಳೂರು:  ಹೋಟೆಲ್‌ ಹಾಗೂ ರೇಸ್ಟೊರೆಂಟ್‌ಗಳಲ್ಲಿ ಕೃತಕ ಬಣ್ಣ ಹಾಗೂ ರಾಸಾಯನಿಕ ಬಳಸುವುದು ಸಾಮಾನ್ಯವಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿ ಕೆಲವು ರೋಗ ರುಜುನುಗಳು ಹರಡಲಿವೆ. ಹೀಗಾಗಿ ರಾಜ್ಯ ಆಹಾರ ಇಲಾಖೆಯು ಎಚ್ಚೆತ್ತು  ಕೃತಕ ಬಣ್ಣ ಹಾಗೂ ರಾಸಾಯನಿಕ  ಬಳಸುವ ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಿಗೆ ದಿಢೀರ್‌ ದಾಳಿ ಮಾಡಿ ಕಾರ್ಯಚರಣೆ ನಡೆಸಲು ಮುಂದಾಗಿದೆ.

ಇದೇ ತಿಂಗಳ ಶುಕ್ರವಾರ ಮತ್ತು ಶನಿವಾರ ಕರ್ನಾಟಕದಾದ್ಯಂತ ಹೋಟೆಲ್, ರೆಸ್ಟೋರೆಂಟ್​​ಗಳ ವಿರುದ್ಧ ಕಾರ್ಯಾಚರಣೆ ನಡೆಯಲಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಆಹಾರ ಇಲಾಖೆಯ ಅಧಿಕಾರಿಗಳು  ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳಲ್ಲಿನ ಮಾಂಸ, ಮೀನು, ಮೊಟ್ಟೆಗಳ ಮಾದರಿಗಳನ್ನೂ ಸಂಗ್ರಹಿಸಿ ತಪಾಸಣೆ ನಡೆಸುತ್ತಾರೆ. ಅಸುರಕ್ಷಿತ ಆಹಾರ ತಯಾರಿಸುತ್ತಿರುವವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಣ್ಣು, ತರಕಾರಿಗಳ 385 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, 266 ಮಾದರಿಗಳಲ್ಲಿ 239 ಸುರಕ್ಷಿತ, 27 ಅಸುರಕ್ಷಿತ ಎಂದು ಕಂಡುಬಂದಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಅಸುರಕ್ಷಿತವೆಂದು ಕಂಡುಬಂದ ಮಾದರಿಗಳಲ್ಲಿ ಕ್ರಿಮಿನಾಶಕಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ. ಫಂಗಸ್ ಬೆಳವಣಿಗೆಯೂ ಪತ್ತೆಯಾಗಿದೆ. 211 ಪನ್ನೀರ್, 246 ಕೇಕ್, 67 ಕೋವಾದ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ವಿಶ್ಲೇಷಣಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜನರೇ ಅಹಾರದ ಗುಣಮಟ್ಟ ಪರೀಕ್ಷೆ ಮಾಡಿಕೊಳ್ಳುವ ಸಲುವಾಗಿ ಹೋಟೆಲ್, ರೆಸ್ಟೋರೆಂಟ್, ಫುಡ್​ಪಾರ್ಕ್​​ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್​​ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…

2 mins ago

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…

38 mins ago

ಶ್ರವಣದೋಷ ಮೆಟ್ಟಿನಿಂತು ಸಾಧನೆ ಮಾಡಿದ ಮಹದೇವ ಪ್ರಸಾದ್ ಕೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…

1 hour ago

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…

1 hour ago

ಏಪ್ರಿಲ್.16ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.‌16ರಂದು ಕರೆಯಲಾಗಿದೆ. ಏಪ್ರಿಲ್.‌16ರ ಸಂಜೆ 4.30ಕ್ಕೆ ವಿಧಾನಸೌಧದ…

2 hours ago

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಸಿದು ಹೋಗಿವೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌…

2 hours ago