ರಾಜ್ಯ

ಕೃತಕ ಬಣ್ಣ, ರಾಸಾಯನಿಕ ಬಳಸುವ ಹೋಟೆಲ್​ಗಳಲ್ಲಿ ಆಹಾರ ಇಲಾಖೆಯಿಂದ ವಿಶೇಷ ಕಾರ್ಯಾಚರಣೆ

ಬೆಂಗಳೂರು:  ಹೋಟೆಲ್‌ ಹಾಗೂ ರೇಸ್ಟೊರೆಂಟ್‌ಗಳಲ್ಲಿ ಕೃತಕ ಬಣ್ಣ ಹಾಗೂ ರಾಸಾಯನಿಕ ಬಳಸುವುದು ಸಾಮಾನ್ಯವಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿ ಕೆಲವು ರೋಗ ರುಜುನುಗಳು ಹರಡಲಿವೆ. ಹೀಗಾಗಿ ರಾಜ್ಯ ಆಹಾರ ಇಲಾಖೆಯು ಎಚ್ಚೆತ್ತು  ಕೃತಕ ಬಣ್ಣ ಹಾಗೂ ರಾಸಾಯನಿಕ  ಬಳಸುವ ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಿಗೆ ದಿಢೀರ್‌ ದಾಳಿ ಮಾಡಿ ಕಾರ್ಯಚರಣೆ ನಡೆಸಲು ಮುಂದಾಗಿದೆ.

ಇದೇ ತಿಂಗಳ ಶುಕ್ರವಾರ ಮತ್ತು ಶನಿವಾರ ಕರ್ನಾಟಕದಾದ್ಯಂತ ಹೋಟೆಲ್, ರೆಸ್ಟೋರೆಂಟ್​​ಗಳ ವಿರುದ್ಧ ಕಾರ್ಯಾಚರಣೆ ನಡೆಯಲಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಆಹಾರ ಇಲಾಖೆಯ ಅಧಿಕಾರಿಗಳು  ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳಲ್ಲಿನ ಮಾಂಸ, ಮೀನು, ಮೊಟ್ಟೆಗಳ ಮಾದರಿಗಳನ್ನೂ ಸಂಗ್ರಹಿಸಿ ತಪಾಸಣೆ ನಡೆಸುತ್ತಾರೆ. ಅಸುರಕ್ಷಿತ ಆಹಾರ ತಯಾರಿಸುತ್ತಿರುವವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಣ್ಣು, ತರಕಾರಿಗಳ 385 ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, 266 ಮಾದರಿಗಳಲ್ಲಿ 239 ಸುರಕ್ಷಿತ, 27 ಅಸುರಕ್ಷಿತ ಎಂದು ಕಂಡುಬಂದಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.

ಅಸುರಕ್ಷಿತವೆಂದು ಕಂಡುಬಂದ ಮಾದರಿಗಳಲ್ಲಿ ಕ್ರಿಮಿನಾಶಕಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ. ಫಂಗಸ್ ಬೆಳವಣಿಗೆಯೂ ಪತ್ತೆಯಾಗಿದೆ. 211 ಪನ್ನೀರ್, 246 ಕೇಕ್, 67 ಕೋವಾದ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ವಿಶ್ಲೇಷಣಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜನರೇ ಅಹಾರದ ಗುಣಮಟ್ಟ ಪರೀಕ್ಷೆ ಮಾಡಿಕೊಳ್ಳುವ ಸಲುವಾಗಿ ಹೋಟೆಲ್, ರೆಸ್ಟೋರೆಂಟ್, ಫುಡ್​ಪಾರ್ಕ್​​ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್​​ಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago