ರಾಜ್ಯ

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚಿಸಿದ್ದಾರೆ.

ಇಂದು (ಜ.24) ವಿಕಾಸಸೌಧದಲ್ಲಿ ಸಂಜೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ್, ಕಲ್ಬುರ್ಗಿ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಎತ್ತರದ ಸಸಿಗಳನ್ನು ಹೆಚ್ಚು ಹೆಚ್ಚು ನೆಟ್ಟು, ಅವುಗಳಿಗೆ ನೀರುಣಿಸಿ, ಜಿಯೋ ಟ್ಯಾಗ್ ಮಾಡಿ ಸಂರಕ್ಷಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಹಸಿರು ಹೊದಿಕೆ ಕಡಿಮೆ ಇರುವ ಜಿಲ್ಲೆಗಳಲ್ಲಿನ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆ ಮತ್ತು ಗ್ರಾಮೀಣ ರಸ್ತೆಗಳನ್ನು ಗುರುತಿಸಿ ರಸ್ತೆಯ ಎರಡೂ ಬದಿಯಲ್ಲಿ ಸಸಿಗಳನ್ನು ನೆಟ್ಟು ಬೆಳೆಸಬೇಕು. ಅದಕ್ಕೆ ಈಗಿನಿಂದಲೇ ರಸ್ತೆಗಳನ್ನು ಗುರುತಿಸಿ, ಕಾರ್ಯಯೋಜನೆ ರೂಪಿಸಿ ಎಂದು ತಿಳಿಸಿದರು.

ಅರಣ್ಯ ಇಲಾಖೆಯ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಿಭಾಗದ ಎಲ್ಲ ನರ್ಸರಿಗಳಲ್ಲಿ ಸ್ಥಳೀಯ ಗಿಡಗಳನ್ನು ಬೆಳೆಸಲು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಎತ್ತರದ ಸಸಿಗಳನ್ನು ಬೆಳೆಸಲು ಕ್ರಮವಹಿಸುವಂತೆ ಸೂಚಿಸಿದರು.

ಇಂದು ಇಡೀ ಜಗತ್ತು ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸಮಸ್ಯೆ ಎದುರಿಸುತ್ತಿದೆ. ವೃಕ್ಷ ಸಂಪತ್ತು ಸಂರಕ್ಷಿಸುವ ಜವಾಬ್ದಾರಿ ಹೊತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಿನ ಪೀಳಿಗೆಗೆ ಆರೋಗ್ಯಪೂರ್ಣ ಭೂಮಿಯನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯ ಜೀವಿ ಪರಿಪಾಲಕರಾದ ಸುಭಾಷ್ ಮಾಲ್ಕಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

5 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

6 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

8 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

11 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

12 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

18 hours ago