ರಾಜ್ಯ

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ಕೋರಿಕೆಯ ಮೇರೆಗೆ ಅವರೊಂದಿಗೆ ಇಂದು ಉನ್ನತಾಧಿಕಾರಿಗಳ ಸಭೆ ನಡೆಸಿದ ಸಚಿವರು, ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ, ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಸುರೇಶ್ ಕುಮಾರ್ ವಿಷಯ ಪ್ರಸ್ತಾಪಿಸಿ ಬೆಂಗಳೂರು ನಗರದಲ್ಲಿ ರಸ್ತೆಯಲ್ಲಿನ ಧೂಳಿನಿಂದಾಗಿ ವಾಯು ಗುಣಮಟ್ಟ ಕ್ಷೀಣಿಸುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ವೈದ್ಯರು ಬೆಂಗಳೂರು ಹೊರ ವಲಯಕ್ಕೆ ಹೋಗುವಂತೆ ಸಲಹೆ ನೀಡುತ್ತಿದ್ದಾರೆ. ವಾಯು ಗುಣಮಟ್ಟ ಕಾಪಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದರು.

ಸ್ಥಳೀಯ ಸಂಸ್ಥೆಗೆ ನೋಟಿಸ್ ನೀಡಲು ಸೂಚನೆ:ಇದಕ್ಕೆ ಸ್ಪಂದಿಸಿದ ಪರಿಸರ ಸಚಿವರು, ಈಗಾಗಲೇ ಬೆಂಗಳೂರಿನ 11 ಸ್ಥಳಗಳಲ್ಲಿ ಸ್ಥಾಪಿತ ಮತ್ತು 13 ಸಂಚಾರಿ ಘಟಕಗಳ ಮೂಲಕ ವಾಯು ಗುಣಮಟ್ಟ ಸೂಚ್ಯಂಕದ ಮೌಲ್ಯಮಾಪನ ಮಾಡಲಾಗುತ್ತಿದೆ ಎಂಬ ಮಾಹಿತಿ ನೀಡಿ. ವಾಯು ಗುಣಮಟ್ಟ ಸೂಚ್ಯಂಕ ಮೌಲ್ಯವು 100 ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಿ. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸಿ ಎಂದು ಸೂಚನೆ ನೀಡಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅವರ ಅಧ್ಯಕ್ಷತೆಯಲ್ಲೇ ಬೆಂಗಳೂರು ನಗರದ ಎಲ್ಲ ಜನಪ್ರತಿನಿಧಿಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

4 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

7 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

7 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

8 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

8 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

8 hours ago