ರಾಜ್ಯ

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ, ತಂಬಾಕು ಉಗುಳಿದರೆ 1000 ರೂ ದಂಡ: ರಾಜ್ಯ ಸರ್ಕಾರ ಅಧಿಸೂಚನೆ

ಬೆಂಗಳೂರು: ಎಲ್ಲೆಂದರಲ್ಲಿ ಸಿಗರೇಟ್‌ ಸೇದಿ ಗುಟ್ಕಾ, ತಂಬಾಕು ಉಗುಳುವವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌ ಸೇದುವುದು, ಎಲ್ಲೆಂದರಲ್ಲಿ ಗುಟ್ಕಾ, ತಂಬಾಕು ಉಗುಳಿದರೆ ಇನ್ಮುಂದೆ ಭಾರೀ ದಂಡ ತೆರಬೇಕಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸಾರ್ವಜನಿಕ ಸ್ಥಳಗಲ್ಲಿ ಸಿಗರೇಟ್‌ ಸೇದಿದರೆ, ಗುಟ್ಕಾ ಉಗುಳಿದರೆ 1000 ರೂಪಾಯಿ ದಂಡ ವಿಧಿಸಲಾಗುವುದು. ಈ ಬಗ್ಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಸಿಗೇಟು ಹಾಗೂ ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಹಾಗೂ ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ-ಕರ್ನಾಟಕ ತಿದ್ದುಪಡಿ ಮಸೂದೆ-2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ.23ರಂದು ಅಂಕಿತ ಹಾಕಿದ್ದು, ಈ ಕುರಿತು ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ ಸರ್ಕಾರ ಕಾಯ್ದೆ ಜಾರಿಗೆ ತಂದಿದೆ.

ಇದನ್ನೂ ಓದಿ:- ಪಿರಿಯಾಪಟ್ಟಣ : ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಇನ್ನು 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಅಲ್ಲದೇ ಹೋಟೆಲ್, ಪಬ್‌, ಬಾರ್‌ ಅಥವಾ ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವನೆಗೂ ನಿಷೇಧ ಹೇರಲಾಗಿದೆ.

ಒಂದು ವೇಳೆ ನಿಯಮ ಉಲ್ಲಂಘಿಸಿದರೆ 50,000 ರೂಪಾಯಿಯಿಂದ 1 ಲಕ್ಷದವರೆಗೆ ದಂಡ ಮತ್ತು ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

4 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

8 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

8 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

8 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

8 hours ago