ರಾಜ್ಯ

ಬಸವತತ್ವ ಪ್ರಸಾರ, ಪ್ರಚಾರ ಇಂದಿನ ಅಗತ್ಯ: ಸಚಿವ ಈಶ್ವರ್ ಖಂಡ್ರೆ‌

ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ದೇವನಹಳ್ಳಿಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವಗುರು ಬಸವೇಶ್ವರರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣಿಗಾಗಿ, ಹೊನ್ನಿಗಾಗಿ, ಮಣ್ಣಿಗಾಗಿ ಜಗತ್ತಿನಲ್ಲಿ ಕ್ರಾಂತಿ ಆಗಿದೆ. ಆದರೆ ಸರ್ವರ ಸಮಾನತೆಗಾಗಿ ಯಾವುದಾದರೂ ಕ್ರಾಂತಿ ನಡೆದಿದ್ದರೆ ಅದು ಕಲ್ಯಾಣದ ಕ್ರಾಂತಿ ಮಾತ್ರ ಎಂದು ಹೇಳಿದರು.

12ನೇ ಶತಮಾನದಲ್ಲಿ ಮನುಷ್ಯರನ್ನು ಮನುಷ್ಯರಂತೆ ಕಾಣುತ್ತಿರಲಿಲ್ಲ. ಮೌಢ್ಯತೆ ಇತ್ತು, ಅನಕ್ಷರತೆ ಇತ್ತು, ಹೆಣ್ಣಿಗೆ ಸಮಾನತೆ ಇರಲಿಲ್ಲ. ಅಂತಹ ಕಾಲಘಟ್ಟದಲ್ಲಿ ಸ್ವಾತಂತ್ರ್ಯ, ಸಮಾನತೆ, ಕಾಯಕ, ದಾಸೋಹ, ಸಹೋದರತ್ವ, ಸಹಬಾಳ್ವೆಯ ತಳಹದಿಯ ಮೇಲೆ ಬಲಿಷ್ಠ ಸುಂದರ ಸಮಾಜದ ನಿರ್ಮಾಣಕ್ಕೆ ವಿಶ್ವಗುರು ಬಸವಣ್ಣನವರ ನೇತೃತ್ವದಲ್ಲಿ ವೈಚಾರಿಕ ಮತ್ತು ವೈಜ್ಞಾನಿಕತೆಯ ತಳಹದಿಯ ಮೇಲೆ ಕ್ರಾಂತಿ ನಡೆಯಿತು. ಶ್ರೇಣಿರಹಿತ, ವರ್ಗರಹಿತ, ಲಿಂಗಭೇದ ರಹಿತ ಸಮ ಸಮಾಜ ನಿರ್ಮಾಣಕ್ಕೆ ಬಸವಣ್ಣನವರು ಶ್ರಮಿಸಿದರು ಎಂದರು.

ಇಡೀ ಜಗತ್ತಿಗೆ ಪ್ರಪ್ರಥಮವಾಗಿ ಸಾಮಾಜಿಕ ನ್ಯಾಯಕೊಟ್ಟ ಸಮುದಾಯ ಯಾವುದಾದರೂ ಇದ್ದರೆ ಅದು ಸರ್ವರಿಗೂ ಲೇಸನ್ನೇ ಬಯಸಿದ ಸಮುದಾಯ ವೀರಶೈವ ಲಿಂಗಾಯತ ಸಮುದಾಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಈಶ್ವರ ಖಂಡ್ರೆ ಪ್ರತಿಪಾದಿಸಿದರು.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳಿನ ಕಲ್ಪನೆಯನ್ನು ನೀಡಿ, ವಿಶ್ವದ ಪ್ರಥಮ ಸಂಸತ್ತು ಅನುಭವ ಮಂಟಪ ಸ್ಥಾಪಿಸಿದರು. ಅಲ್ಲಿ 770 ವಿವಿಧ ವೃತ್ತಿಯ, ವಿವಿಧ ಸಮುದಾಯದ ಅಮರಗಣಂಗಳು ಪಾಲ್ಗೊಳ್ಳುತ್ತಿದ್ದರು. ಅವರೆಲ್ಲರೂ ವಚನಗಳನ್ನು ರಚಿಸಿದ್ದಾರೆ. ಪ್ರಜಾಪ್ರಭುತ್ವದ ಪರಿಕಲ್ಪನೆಗೆ ತಳಹದಿಯಾದ ಅನುಭವ ಮಂಟಪ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿದೆ ಎಂದರು.

2015ರಲ್ಲಿ ತಾವು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ಮಾಡಿದ ಮನವಿಗೆ ಮನ್ನಣೆ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಘೋಷಿಸಿದರು. ಇತ್ತೀಚೆಗೆ ಆಧುನಿಕ ಅನುಭವ ಮಂಟಪ ಕಾಮಗಾರಿಗೆ 105 ಕೋಟಿ ಬಿಡುಗಡೆ ಮಾಡುವುದರೊಂದಿಗೆ ಈವರೆಗೆ 280 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಕಾಮಗಾರಿ ಭರದಿಂದ ಸಾಗಿದ್ದು, ಮುಂದಿನ ವರ್ಷದೊಳಗೆ ಇದರ ಲೋಕಾರ್ಪಣೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಹಾ ಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಸಂಸದ ಸುಧಾಕರ್, ಶಾಸಕರಾದ ಧೀರಜ್ ಮುನಿರಾಜ್, ಶರತ್ ಬಚ್ಚೇಗೌಡ ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

1 hour ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

5 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

8 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

12 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

12 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

12 hours ago