Mysore
19
overcast clouds
Light
Dark

ಹೃದಯಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಕಲಬುರುಗಿ : ತೀವ್ರ ಹೃದಯಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ.

ಕಾಳಗಿ ತಾಲೂಕಿನ ರಟಕಲ್‌ ಗ್ರಾಮದಲ್ಲಿರೋ ವಿರಕ್ತ ಮಠದಲ್ಲಿ ಇಂದು ನುಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಸಾವನ್ನಪ್ಪಿದ್ದಾರೆ.  ಇಂದು ಸಂಜೆ ೫ ಗಂಟೆಗೆ ರಟಕಲ್‌ ಗ್ರಾಮದಲ್ಲಿ ವಿಧಿವಿಧಾನದ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ. ಅಲ್ಲದೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.