ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ತಮ್ಮ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆಂದು ಅಸಮಾಧಾನಗೊಂಡು ಮಾಜಿ ಸಚಿವ ಶ್ರೀ ರಾಮುಲು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಉಹಾಪೋಹಗಳು ಎದ್ದಿದ್ದವು. ಈ ಬಗ್ಗೆ ಸ್ವತಃ ಶ್ರೀರಾಮುಲು ಅವರೇ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ಸಿಗರು ನನ್ನನ್ನು ಗೌರವದಿಂದ ಕಂಡಿದ್ದಾರೆ. ನಾನು ಒಳ್ಳೆಯವನಾಗಿರುವುದಕ್ಕೆ ನನ್ನ ಮೇಲೆ ಗೌರವವಿಟ್ಟು ಪಕ್ಷ ಸೇರ್ಪಡೆಗೆ ಆಹ್ವಾನ ನೀಡಿದ್ದಾರೆ. ನನ್ನನ್ನು ಗೌರವಿಸಿದ ಕಾಂಗ್ರೆಸ್ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ ಎಂದರು.
ಮಾಧ್ಯಮದ ಮೂಲಕ ಕಾಂಗ್ರೆಸ್ ಪಕ್ಷದವರು ಬಹಿರಂಗವಾಗಿ ಕರೆಯುತ್ತಿದ್ದಾರೆ. ಆದರೆ ಯಾರೇ ಕರೆದರೂ ಹೋಗಲು ನನ್ನ ಮನಸ್ಥಿತಿ ಇರಬೇಕು. ಬಿಜೆಪಿ ನನ್ನ ತಾಯಿ. ನಾನು ಬಿಜೆಪಿಯಲ್ಲೇ ಇರುತ್ತೇನೆ. ಏನೇ ಮಾಡಬೇಕಿದ್ದರೂ ನಿಮ್ಮ ಒಪ್ಪಿಗೆಯ ಮೂಲಕವೇ ಮಾಡುತ್ತೇನೆ ಎಂದು ತಿಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…