ಬೆಂಗಳೂರು: ಜನಾರ್ಧನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ಲಾನ್ ಮಾಡಿದ್ದಾರೆ ಎಂದು ಶ್ರೀರಾಮುಲು ಕೆಂಡಾಮಂಡಲರಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ಉಪಚುನಾವಣೆ ಸಂಬಂಧ ಶ್ರೀರಾಮುಲುರನ್ನು ರಾಧಾ ಮೋಹನ್ ದಾಸ್ ತರಾಟೆಗೆ ತೆಗೆದುಕೊಂಡರು.
ಸಂಡೂರು ಕ್ಷೇತ್ರದಲ್ಲಿ ಬಂಗಾರು ಹನುಮಂತು ಸೋಲಿಗೆ ಶ್ರೀರಾಮುಲು ಕಾರಣ ಎಂದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಸಭೆಯಿಂದ ಬೇಸರದಿಂದಲೇ ಹೊರ ನಡೆದ ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮುಲು ಅವರು, ಜನಾರ್ಧನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಹೇಳಿಕೆ ಬೆನ್ನಲ್ಲೇ ಒಂದು ಕಾಲದಲ್ಲಿ ಗೆಳೆಯರಾಗಿದ್ದುಕೊಂಡು ಗಡಿನಾಡಿನಲ್ಲಿ ಬಿಜೆಪಿ ಕಟ್ಟಿದ್ದ ನಾಯಕರಿಗೆ ಏನಾಯಿತು ಎಂದು ಕಾರ್ಯಕರ್ತರು ಪ್ರಶ್ನೆ ಮಾಡುತ್ತಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…