ರಾಜ್ಯ

ಶ್ರೀರಾಮುಲು ಕಾಂಗ್ರೆಸ್‌ಗೆ: ಸಚಿವ ಮಹದೇವಪ್ಪ ಹೇಳಿದ್ದೇನು?

ಬೆಂಗಳೂರು: ಬಿಜೆಪಿ ನಾಯಕ ಬಿ.ಶ್ರೀರಾಮಲು ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂಬುದು ಕೇವಲ ಊಹಾಪೋಹ ಎಂದು ಸಚಿವ ಎಚ್.ಸಿ ಮಹದೇವಪ್ಪ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ಸೇರಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಟ್ಟಿಹಾಕಲು ಡಿಸಿಎಂ ಡಿಕೆ ಶಿವಕುಮಾರ್‌ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ ಎಂಬುದು ಕಲ್ಪನೆಯಷ್ಟೆ. ಅಂತಹ ಯಾವದೇ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಬಿರುಕು ಮೂಡಿಸಲು ಈ ರೀತಿಯ ತಪ್ಪು ಸಂದೇಶ ಹರಡಲಾಗುತ್ತಿದೆ ಎಂದು ದೂರಿದ ಸಚಿವರು, ನಾವೂ ಅಧಿಕಾರ ನಡೆಸುತ್ತಿದ್ದೇವೆ. ಅಹಿಂದ ನಾಯಕರಾಗಿ ಸತೀಶ ಜಾರಕಿಹೊಳಿ ಬೆಳೆಯುತ್ತಿದ್ದಾರೆ. ಹೀಗಿರುವಾಗ ಈ ಪ್ರಶ್ನೆಯ ಅಪ್ರಸ್ತುತ ಎಂದರು.

 

 

 

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

1 min ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

1 hour ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

1 hour ago

ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ: ಮುಂದಿನ 7 ದಿನ ಮುಂದುವರಿಯಲಿದೆ ಮಳೆ

ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…

2 hours ago

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

2 hours ago

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

3 hours ago