ಚಿಕ್ಕಮಗಳೂರು: ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಶೃಂಗೇರಿ ಶಾರದಾ ಪೀಠದಿಂದ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.
ಶೃಂಗೇರಿ ಶಾರದಾ ದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್.15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುರುಷರಲ್ಲಿ ಧೋತಿ ಶಲ್ಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್-ದುಪಟ್ಟ ಅಥವಾ ಲಂಗ ದಾವಣಿಗಳಂತಹ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವಿಯ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತಿಳಿಸಿದೆ.
ಇನ್ನೂ ದೇವಾಲಯದ ಆಡಳಿತ ಮಂಡಳಿ ಸೂಚಿಸಿದ ಉಡುಪು ಧರಿಸದೇ ಬಂದರೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ದೇವಸ್ಥಾನದ ಆವರಣ, ತುಂಗಾ ತೀರ, ಕಪ್ಪೆ ಶಂಕರನಗುಡಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ಶಾರದಾ ತಾಯಿಯ ದರ್ಶನ ಮಾಡಲು ಮಾತ್ರ ಈ ನಿಯಮ ಕಡ್ಡಾಯ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಭಕ್ತರು ಶೃಂಗೇರಿಗೆ ಹೋಗಬೇಕಾದರೆ ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲಿ ಹೋಗಬೇಕು. ಒಂದು ವೇಳೆ ಜೀನ್ಸ್ ಹಾಗೂ ಟೀಶರ್ಟ್ಗಳಲ್ಲಿ ಹೋದರೆ ದೇವಾಲಯದ ಬಾಗಿಲ ಬಳಿಯಿಂದಲೇ ಆಚೆ ಬರಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…