ಚಿಕ್ಕಮಗಳೂರು: ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಶೃಂಗೇರಿ ಶಾರದಾ ಪೀಠದಿಂದ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.
ಶೃಂಗೇರಿ ಶಾರದಾ ದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್.15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುರುಷರಲ್ಲಿ ಧೋತಿ ಶಲ್ಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್-ದುಪಟ್ಟ ಅಥವಾ ಲಂಗ ದಾವಣಿಗಳಂತಹ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವಿಯ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತಿಳಿಸಿದೆ.
ಇನ್ನೂ ದೇವಾಲಯದ ಆಡಳಿತ ಮಂಡಳಿ ಸೂಚಿಸಿದ ಉಡುಪು ಧರಿಸದೇ ಬಂದರೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ದೇವಸ್ಥಾನದ ಆವರಣ, ತುಂಗಾ ತೀರ, ಕಪ್ಪೆ ಶಂಕರನಗುಡಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ಶಾರದಾ ತಾಯಿಯ ದರ್ಶನ ಮಾಡಲು ಮಾತ್ರ ಈ ನಿಯಮ ಕಡ್ಡಾಯ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಭಕ್ತರು ಶೃಂಗೇರಿಗೆ ಹೋಗಬೇಕಾದರೆ ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲಿ ಹೋಗಬೇಕು. ಒಂದು ವೇಳೆ ಜೀನ್ಸ್ ಹಾಗೂ ಟೀಶರ್ಟ್ಗಳಲ್ಲಿ ಹೋದರೆ ದೇವಾಲಯದ ಬಾಗಿಲ ಬಳಿಯಿಂದಲೇ ಆಚೆ ಬರಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…
ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…
ಹೇಮಂತ್ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…