ಚಿಕ್ಕಮಗಳೂರು: ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಶೃಂಗೇರಿ ಶಾರದಾ ಪೀಠದಿಂದ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.
ಶೃಂಗೇರಿ ಶಾರದಾ ದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್.15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುರುಷರಲ್ಲಿ ಧೋತಿ ಶಲ್ಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್-ದುಪಟ್ಟ ಅಥವಾ ಲಂಗ ದಾವಣಿಗಳಂತಹ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವಿಯ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತಿಳಿಸಿದೆ.
ಇನ್ನೂ ದೇವಾಲಯದ ಆಡಳಿತ ಮಂಡಳಿ ಸೂಚಿಸಿದ ಉಡುಪು ಧರಿಸದೇ ಬಂದರೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ದೇವಸ್ಥಾನದ ಆವರಣ, ತುಂಗಾ ತೀರ, ಕಪ್ಪೆ ಶಂಕರನಗುಡಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ಶಾರದಾ ತಾಯಿಯ ದರ್ಶನ ಮಾಡಲು ಮಾತ್ರ ಈ ನಿಯಮ ಕಡ್ಡಾಯ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಭಕ್ತರು ಶೃಂಗೇರಿಗೆ ಹೋಗಬೇಕಾದರೆ ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲಿ ಹೋಗಬೇಕು. ಒಂದು ವೇಳೆ ಜೀನ್ಸ್ ಹಾಗೂ ಟೀಶರ್ಟ್ಗಳಲ್ಲಿ ಹೋದರೆ ದೇವಾಲಯದ ಬಾಗಿಲ ಬಳಿಯಿಂದಲೇ ಆಚೆ ಬರಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…