ಬೆಂಗಳೂರು: ರಾಜ್ಯಾದ್ಯಂತ ಇದೇ ಮಾರ್ಚ 25ರಿಂದ ಏಪ್ರಿಲ್ 6ವರೆಗೆ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ.
ನಾಳೆ (ಮೇ.9) ಬೆಳಿಗ್ಗೆ 10.30ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಾದ ಎನ್. ಮಂಜುಶ್ರೀ ಪತ್ರಿಕಾಗೋಷ್ಠಿ ನಡೆಸಿ ಪರೀಕ್ಷಾ ಫಲಿತಾಂಶದ ಮಾಹಿತಿ ನೀಡಲಿದ್ದಾರೆ.
ಈ ಬಾರಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 4,41,910 ಬಾಲಕರು ಮತ್ತು 4,28,058 ಮಂದಿ ಬಾಲಕೀಯರು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯ ನಾಳೆ ಪ್ರಕಟಗೊಳ್ಳಲಿದೆ.
ಈ ವೆಬ್ಸೈಟ್ ಮೂಲಕ ನಿಮ್ಮ ರಿಸಲ್ಟ್ ನೋಡಿ: ನಾಳೆ ಬೆಳಿಗ್ಗೆ ಪತ್ರಿಕಾಗೋಷ್ಠಿ ನಂತರ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ಗಳಾದ kseab.karnataka.gov.in ಅಥವಾ karresults.nic.in ವೆಬ್ಸೈಟ್ನಲ್ಲಿ ತಮ್ಮ ರಿಜಿಸ್ಟರ್ ನಂಬರ್ ಹಾಗೂ ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ವಿದ್ಯಾರ್ಥಿಗಳು ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ.
ಅನುತ್ತೀರ್ಣರಾದರೇ ಭಯಪಡಬೇಕಿಲ್ಲಾ: ನಾಳೆ ಫಲಿತಾಂಶದಿಂದ ಅನುತ್ತೀರ್ಣರಾದರೇ ಮತ್ತೇನು ಮಾಡಬೇಕು ಎಂದು ವಿದ್ಯಾರ್ಥಿಗಳಾರು ಚಿಂತೆ ಮಾಡಬೇಕಿಲ್ಲ. ಸರ್ಕಾರ ಈ ಶೈಕ್ಷಣಿಕ ವರ್ಷದಿಂದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮೂರು ಬಾರಿ ಬರೆಯಬಹುದಾಗಿದೆ. ಮೊದಲೆಲ್ಲಾ ಪರೀಕ್ಷೆಯಲ್ಲಿ ಫೇಲಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಈಗ ಪಾಸಾದವರು ಸೇರಿದಂತೆ ಎಲ್ಲರೂ ಮೂರು ಬಾರಿ ಪರೀಕ್ಷೆ ಬರೆಯಬಹುದಾಗಿದೆ. ಫೇಲಾದವರಿಗೆ ಪಾಸಾಗಲು ಅವಕಾಶ ಸಿಕ್ಕರೇ ಇತ್ತ ಪಾಸಾದವರಿಗೆ ಹೆಚ್ಚಿನ ಅಂಕ ಗಳಿಸಲು ಇದು ಸಹಕರಿಸಲಿದೆ. ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ತಮಗೆ ಯಾವ ಅಂಕ ಸೂಕ್ತವಾಗಲಿದೆ ಅದನ್ನೆ ಅಂತಿಮ ಅಂಕ ಪಟ್ಟಿಯಲ್ಲಿ ನಮೂದಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…