ರಾಜ್ಯ

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಏ.2ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪರೀಕ್ಷಾ ದಿನಾಂಕ ಮತ್ತು ಫಲಿತಾಂಶದ ದಿನಾಂಕವನ್ನು ಸಾಕಷ್ಟು ಮುಂಚಿತವಾಗಿಯೇ ಪ್ರಕಟಿಸಿರುವುದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಳತೆ ತಂದಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಲು ಮತ್ತು ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಲು ಸಹಕಾರಿಯಾಗಲಿದೆ.

ಮಾರ್ಚ್ 18ರಂದು ಪ್ರಥಮ ಭಾಷಾ ವಿಷಯಗಳೊಂದಿಗೆ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 2ರಂದು ಕೋರ್ ಸಬ್ಜೆಕ್ಟ್ ಸಮಾಜ ವಿಜ್ಞಾನ ಪರೀಕ್ಷೆಯೊಂದಿಗೆ ಮುಕ್ತಾಯಗೊಳ್ಳಲಿದೆ. ರಾಜ್ಯಾದ್ಯಂತ ಸುಮಾರು 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಹದ್ದಿನ ಕಣ್ಣಿಡಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಸಾಮಾನ್ಯವಾಗಿ ಪರೀಕ್ಷೆ ಮುಗಿದು ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ದೀರ್ಘಕಾಲ ಕಾಯಬೇಕಾಗಿತ್ತು. ಆದರೆ, ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಮಂಡಳಿ ನಿರ್ಧರಿಸಿದೆ. ಪರೀಕ್ಷೆ ಮುಗಿದ ತಕ್ಷಣವೇ ಏಪ್ರಿಲ್ ತಿಂಗಳಿನಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಮೇ 8 ರಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಂಡಳಿ ಸ್ಪಷ್ಟಪಡಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago