ರಾಜ್ಯ

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಮೂಲಕ, ವಿದ್ಯಾರ್ಥಿಗಳ ಒಟ್ಟು ಅಂಕಗಳ ಲೆಕ್ಕಾಚಾರದಲ್ಲಿ ತೃತೀಯ ಭಾಷೆಯ ಪ್ರಾಮುಖ್ಯತೆಯನ್ನು ಮಾರ್ಪಡಿಸಲಾಗಿದೆ. ಈ ನೂತನ ಕ್ರಮದಿಂದಾಗಿ ಪರೀಕ್ಷೆಯ ಗರಿಷ್ಠ ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಲಿವೆ.

ಕಳೆದ ಹಲವು ದಶಕಗಳಿಂದ ಕನ್ನಡ ಪರ ಸಂಘಟನೆಗಳು ಮತ್ತು ಶಿಕ್ಷಣ ತಜ್ಞರು ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಸೇರಿಸಬಾರದು ಎಂದು ಒತ್ತಾಯಿಸುತ್ತಿದ್ದರು. ಈ ಬೇಡಿಕೆಗೆ ಸ್ಪಂದಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಇನ್ನು ಮುಂದೆ ತೃತೀಯ ಭಾಷೆಯಾದ ಹಿಂದಿ (ಅಥವಾ ಯಾವುದೇ ತೃತೀಯ ಭಾಷೆ) ವಿಷಯದ ಅಂಕಗಳನ್ನು ವಿದ್ಯಾರ್ಥಿಗಳ ಒಟ್ಟು ಅಂಕಗಳ ಪಟ್ಟಿಯಲ್ಲಿ ಸೇರಿಸಲಾಗುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

ಈ ವರ್ಷದಿಂದ ರಾಜ್ಯದ ಪಠ್ಯಕ್ರಮದಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ಬರೆಯುತ್ತಾರೆ. ಆದರೆ ಆ ಭಾಷೆಯ 100 ಅಂಕ ಪರಿಗಣೆ ಮಾಡುವುದಿಲ್ಲ ಎಂದು ತಿಳಿಸಿದರು.

ತೃತೀಯ ಭಾಷೆಗೆ ಎಬಿಸಿಡಿ ಎಂದು ಗ್ರೇಡ್‌ ನೀಡುತ್ತೇವೆ. ಈ ವರ್ಷದ ಪರೀಕ್ಷೆಯಲ್ಲಿ ಈ ನಿಯಮವನ್ನು ಜಾರಿ ಮಾಡಲಾಗುವುದು. ಇಂದು ಸಂಜೆ ಒಳಗಡೆ ಆದೇಶ ಜಾರಿಯಾಗಲಿದೆ ಎಂದರು.

ಈ ವೇಳೆ ಉರ್ದು ಮಾಧ್ಯಮ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಓದಿಸಲಾಗುತ್ತದೆ. ಇಲ್ಲಿ ಕನ್ನಡ ಇರುವುದಿಲ್ಲವೇ ಎಂಬ ಪ್ರಶ್ನೆಗೆ, ಇದಕ್ಕೆ ಒಂದು ನಿಯಮವನ್ನು ನಾವು ಮಾಡುತ್ತೇವೆ. ಕನ್ನಡ ವಿಷಯಕ್ಕೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಹಿಂದಿ ಭಾಷೆ ಇನ್ಮುಂದೆ ಕೇವಲ ಗ್ರೇಡ್‌ಗೆ ಸೀಮಿತ!
ಈವರೆಗಿನ ಪದ್ಧತಿಯಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಆರು ವಿಷಯಗಳಲ್ಲಿ ಒಟ್ಟು 625 ಅಂಕಗಳಿಗೆ ಪರೀಕ್ಷೆ ಬರೆಯುತ್ತಿದ್ದರು. ಇದರಲ್ಲಿ ಹಿಂದಿ (ಮೂರನೇ ಭಾಷೆ) ಪತ್ರಿಕೆಯೂ ಸೇರಿತ್ತು. ಆದರೆ ಈಗಿನ ಹೊಸ ಪ್ರಸ್ತಾವನೆಯ ಪ್ರಕಾರ, ಹಿಂದಿ ಭಾಷೆಯ ಅಂಕಗಳನ್ನು ವಿದ್ಯಾರ್ಥಿಯ ಒಟ್ಟು ಶೇಕಡಾವಾರು ಲೆಕ್ಕಾಚಾರಕ್ಕೆ ತೆಗೆದುಕೊಳ್ಳಲಾಗುವುದಿಲ್ಲ. ಬದಲಾಗಿ, ಹಿಂದಿ ವಿಷಯದಲ್ಲಿ ವಿದ್ಯಾರ್ಥಿ ಪಡೆಯುವ ಅಂಕಗಳನ್ನು ಎ, ಬಿ, ಸಿ ಅಥವಾ ಡಿ ಎಂಬ ‘ಗ್ರೇಡ್’ ಮಾದರಿಯಲ್ಲಿ ನೀಡಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂಬುದು ಸರ್ಕಾರದ ಆಶಯ.

 

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

2 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

2 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

2 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

2 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

2 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

3 hours ago