ರಾಜ್ಯ

SSLC EXAM | ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ; ಮಂಡಳಿ ಸ್ಪಷ್ಟನೆ

ಬೆಂಗಳೂರು:  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹಾಜರಾತಿ ಹಾಗೂ ಪರೀಕ್ಷೆ ನಿಯಮಗಳಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.

ಹಿಂದಿನ ಶೈಕ್ಷಣಿಕ ಸಾಲಿನಂತೆಯೇ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ ಎಂದು ಮಂಡಳಿಯ ಅಧ್ಯಕ್ಷ ಬಸವರಾಜೇಂದ್ರ ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿರುವ ದಿನಗಳಿಗೆ ಅನುಸಾರ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿದೆ. 2024ರ ಪರೀಕ್ಷೆ-1ಕ್ಕೆ ನೊಂದಾಯಿಸಿಕೊಂಡು ಶೇ.75ಕ್ಕಿಂತ ಹಾಜರಾತಿ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಟಿಯಿಂದ ಪರೀಕ್ಷೆ-2 ಮತ್ತು ಪರೀಕ್ಷೆ 3ಕ್ಕೆ ಖಾಸಗಿ ಅಭ್ಯರ್ಥಿಯಾಗಿ ನೋಂದಣಿ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದ್ದಾರೆ.

ಅದೇ ರೀತಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಸಹ ಈ ನಿಯಮವನ್ನೇ ಮುಂದುವರೆಸಲಾಗುವುದು ಎಂದು ಬಸವರಾಜೇಂದ್ರ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago