ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.
ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಎಸ್ಎಸ್ಎಲ್ಸಿಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯೂ ಇದೇ ಆರೋಪಕ್ಕೆ ಸಿಲುಕಿದೆ.
ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇವಲ 30 ರೂಪಾಯಿಗೆ ಮರಾಟವಾಗುತ್ತಿವೆ. ಅದರಲ್ಲೂ ಇನ್ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್ನಲ್ಲಿ ಕೆಲವರು ಪ್ರಶ್ನೆ ಪತ್ರಿಕೆಯನ್ನೇ ಟ್ಯಾಗ್ ಮಾಡಿ ಸೋರಿಕೆ ಮಾಡಿದ್ದಾರೆ.
ಪ್ರಶ್ನೆಪತ್ರಿಕೆ ಬೇಕೇ ಎಂದು ಕೇಳಲಾಗುತ್ತಿದ್ದು, ಕೇವಲ 30 ರೂ.ಕೊಟ್ಟರೆ ತಲುಪಿಸಲಾಗುವುದು ಎಂದು ಬೇಡಿಕೆ ಇಟ್ಟಿದ್ದಾರೆ. ಯಾವುದೋ ಮೊಬೈಲ್ ಪ್ರಮೋಷನ್ ವಿಡಿಯೋ ಮಾಡುವಂತೆ ಕಿಡಿಗೇಡಿಗಳು ಇನ್ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್ನಲ್ಲಿ ಪ್ರಶ್ನೆ ಪತ್ರಿಕೆ ಬೇಕಿದ್ದರೆ ಡಿಎಂ ಮಾಡಿ ಎಂದು ಬಹಿರಂಗವಾಗಿ ಪೋಸ್ಟ್ ಹಾಕುತ್ತಿದ್ದಾರೆ.
ಪರೀಕ್ಷೆ ಆರಂಭಕ್ಕೂ ಮುನ್ನ ಬೆಳಿಗ್ಗೆ 8.15ಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ. ಇಷ್ಟೆ ಅಲ್ಲದೆ, ಕ್ಯೂಆರ್ ಕೋಡ್ ಕಳುಹಿಸಿ 30 ರೂ.ಗಳಿಂದ 50 ರೂ. ಹಣ ಪಾವತಿಸಿದರೆ ಸಾಕು, ನಿಮ್ಮ ಕೈಗೆ ಪ್ರಶ್ನೆ ಪತ್ರಿಕೆ ಸೇರುತ್ತದೆ ಎಂಬ ಆಫರ್ಗಳು ಬರುತ್ತಿವೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ, ತಮ್ಮ ಇನ್ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಇಂತಹ ಕೃತ್ಯವೆಸಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಂಡಳಿ ಹೇಳುವುದೇನು?
ಈ ಆರೋಪದ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಲಾಗಿದೆ. ಐದು ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿಲ್ಲ, ಕೇವಲ ಎರಡು ಮಾತ್ರ ಸೋರಿಕೆಯಾಗಿರಬಹುದು ಎಂಬ ಅನುಮಾನವಿದೆ ಎಂದು ಮಂಡಳಿ ಹೇಳಿದೆ.
ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದು ಕೇವಲ ಹಣ ಮಾಡುವ ಉದ್ದೇಶದ ಸುಳ್ಳು ಸುದ್ದಿಯೂ ಆಗಿರಬಹುದು ಎಂದು ಮಂಡಳಿ ಶಂಕೆ ವ್ಯಕ್ತಪಡಿಸಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…