ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.
ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಎಸ್ಎಸ್ಎಲ್ಸಿಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಯೂ ಇದೇ ಆರೋಪಕ್ಕೆ ಸಿಲುಕಿದೆ.
ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇವಲ 30 ರೂಪಾಯಿಗೆ ಮರಾಟವಾಗುತ್ತಿವೆ. ಅದರಲ್ಲೂ ಇನ್ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್ನಲ್ಲಿ ಕೆಲವರು ಪ್ರಶ್ನೆ ಪತ್ರಿಕೆಯನ್ನೇ ಟ್ಯಾಗ್ ಮಾಡಿ ಸೋರಿಕೆ ಮಾಡಿದ್ದಾರೆ.
ಪ್ರಶ್ನೆಪತ್ರಿಕೆ ಬೇಕೇ ಎಂದು ಕೇಳಲಾಗುತ್ತಿದ್ದು, ಕೇವಲ 30 ರೂ.ಕೊಟ್ಟರೆ ತಲುಪಿಸಲಾಗುವುದು ಎಂದು ಬೇಡಿಕೆ ಇಟ್ಟಿದ್ದಾರೆ. ಯಾವುದೋ ಮೊಬೈಲ್ ಪ್ರಮೋಷನ್ ವಿಡಿಯೋ ಮಾಡುವಂತೆ ಕಿಡಿಗೇಡಿಗಳು ಇನ್ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್ನಲ್ಲಿ ಪ್ರಶ್ನೆ ಪತ್ರಿಕೆ ಬೇಕಿದ್ದರೆ ಡಿಎಂ ಮಾಡಿ ಎಂದು ಬಹಿರಂಗವಾಗಿ ಪೋಸ್ಟ್ ಹಾಕುತ್ತಿದ್ದಾರೆ.
ಪರೀಕ್ಷೆ ಆರಂಭಕ್ಕೂ ಮುನ್ನ ಬೆಳಿಗ್ಗೆ 8.15ಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ. ಇಷ್ಟೆ ಅಲ್ಲದೆ, ಕ್ಯೂಆರ್ ಕೋಡ್ ಕಳುಹಿಸಿ 30 ರೂ.ಗಳಿಂದ 50 ರೂ. ಹಣ ಪಾವತಿಸಿದರೆ ಸಾಕು, ನಿಮ್ಮ ಕೈಗೆ ಪ್ರಶ್ನೆ ಪತ್ರಿಕೆ ಸೇರುತ್ತದೆ ಎಂಬ ಆಫರ್ಗಳು ಬರುತ್ತಿವೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ, ತಮ್ಮ ಇನ್ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಇಂತಹ ಕೃತ್ಯವೆಸಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಂಡಳಿ ಹೇಳುವುದೇನು?
ಈ ಆರೋಪದ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಲಾಗಿದೆ. ಐದು ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿಲ್ಲ, ಕೇವಲ ಎರಡು ಮಾತ್ರ ಸೋರಿಕೆಯಾಗಿರಬಹುದು ಎಂಬ ಅನುಮಾನವಿದೆ ಎಂದು ಮಂಡಳಿ ಹೇಳಿದೆ.
ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದು ಕೇವಲ ಹಣ ಮಾಡುವ ಉದ್ದೇಶದ ಸುಳ್ಳು ಸುದ್ದಿಯೂ ಆಗಿರಬಹುದು ಎಂದು ಮಂಡಳಿ ಶಂಕೆ ವ್ಯಕ್ತಪಡಿಸಿದೆ.
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…
ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…
ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…
ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…