ರಾಜ್ಯ

ಎಸ್‌.ಎಸ್‌.ಎಲ್.ಸಿ, ಪಿ.ಯು.ಸಿ ಪರೀಕ್ಷೆ : ತಾತ್ಕಾಲಿಕ ವೇಳಾಪಟ್ಟಿ ಪ್ರಕಣ

ಬೆಂಗಳೂರು : 2026 ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ 09-05-2026ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.

ಇನ್ನೂ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 18-03-2026ರಿಂದ ಆರಂಭಗೊಂಡು, ದಿನಾಂಕ 01-04-2026ರವರೆಗೆ ನಡೆಯಲಿವೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 18-05-2026ರಿಂದ ಆರಂಭಗೊಂಡು, ದಿನಾಂಕ 25-05-2026ರವರೆಗೆ ನಡೆಯಲಿದೆ.

ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. ದಿನಾಂಕ 20-09-2025ರಂದು ಪ್ರಕಟಿಸಿರುವಂತ ಈ ತಾತ್ಕಾಲಿಕ ವೇಳಾಪಟ್ಟಿಗೆ ದಿನಾಂಕ 20-09-2025ರಿಂದ 09-10-2025ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಆಕ್ಷೇಪಣೆಗಳನ್ನು chairpersonkseab@gmail.com ಗೆ ಕಳುಹಿಸುವಂತೆ ಮಂಡಳಿಯು ಸೂಚಿಸಿದೆ.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

1 hour ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

1 hour ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

1 hour ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

2 hours ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

2 hours ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago