ಬೆಂಗಳೂರು : 2026 ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ 09-05-2026ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.
ಇನ್ನೂ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 18-03-2026ರಿಂದ ಆರಂಭಗೊಂಡು, ದಿನಾಂಕ 01-04-2026ರವರೆಗೆ ನಡೆಯಲಿವೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 18-05-2026ರಿಂದ ಆರಂಭಗೊಂಡು, ದಿನಾಂಕ 25-05-2026ರವರೆಗೆ ನಡೆಯಲಿದೆ.
ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. ದಿನಾಂಕ 20-09-2025ರಂದು ಪ್ರಕಟಿಸಿರುವಂತ ಈ ತಾತ್ಕಾಲಿಕ ವೇಳಾಪಟ್ಟಿಗೆ ದಿನಾಂಕ 20-09-2025ರಿಂದ 09-10-2025ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಆಕ್ಷೇಪಣೆಗಳನ್ನು chairpersonkseab@gmail.com ಗೆ ಕಳುಹಿಸುವಂತೆ ಮಂಡಳಿಯು ಸೂಚಿಸಿದೆ.
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…