ಬೆಂಗಳೂರು : 2026 ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ 09-05-2026ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.
ಇನ್ನೂ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 18-03-2026ರಿಂದ ಆರಂಭಗೊಂಡು, ದಿನಾಂಕ 01-04-2026ರವರೆಗೆ ನಡೆಯಲಿವೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 18-05-2026ರಿಂದ ಆರಂಭಗೊಂಡು, ದಿನಾಂಕ 25-05-2026ರವರೆಗೆ ನಡೆಯಲಿದೆ.
ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. ದಿನಾಂಕ 20-09-2025ರಂದು ಪ್ರಕಟಿಸಿರುವಂತ ಈ ತಾತ್ಕಾಲಿಕ ವೇಳಾಪಟ್ಟಿಗೆ ದಿನಾಂಕ 20-09-2025ರಿಂದ 09-10-2025ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಆಕ್ಷೇಪಣೆಗಳನ್ನು chairpersonkseab@gmail.com ಗೆ ಕಳುಹಿಸುವಂತೆ ಮಂಡಳಿಯು ಸೂಚಿಸಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…