ಮೈಸೂರು: ಇಂದು ( ಮೇ 9 ) ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಪರೀಕ್ಷೆ ಬರೆದ ಒಟ್ಟು 8,59,967 ವಿದ್ಯಾರ್ಥಿಗಳ ಪೈಕಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.73.40 ಫಲಿತಾಂಶ ಬಂದಿದೆ.
ಆದರೆ ಕಳೆದ ವರ್ಷ ಶೇ. 83.89ರಷ್ಟು ಬಂದಿದ್ದ ಎಸ್ಎಸ್ಎಲ್ಸಿ ಫಲಿತಾಂಶ ಈ ಬಾರಿ ಕುಸಿತ ಕಂಡಿದೆ. ಅಂದರೆ ಬರೋಬ್ಬರಿ 10% ಕಳೆದ ವರ್ಷಕ್ಕಿಂತ ಕಡಿಮೆ ಫಲಿತಾಂಶ ಈ ಬಾರಿ ಬಂದಿದೆ. ಕಳೆದ ಬಾರಿ ಒಟ್ಟು 8,35,102 ವಿದ್ಯಾರ್ಥಿಗಳ ಪೈಕಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.
ಕಳೆದ ಬಾರಿ ಎರಡನೇ ಸ್ಥಾನ ಪಡೆದುಕೊಂಡಿದ್ದ ಮಂಡ್ಯ ಜಿಲ್ಲೆ ಈ ಬಾರಿ 19ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಬರೋಬ್ಬರಿ 17 ಸ್ಥಾನ ಕುಸಿತ ಕಂಡಿದ್ದು, ಮೈಸೂರು 16ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಇನ್ನು 7ನೇ ಸ್ಥಾನದಲ್ಲಿದ್ದ ಚಾಮರಾಜನಗರ 24ನೇ ಸ್ಥಾನಕ್ಕೆ ಕುಸಿತ ಕಂಡಿದ್ದು, 9ನೇ ಸ್ಥಾನ ಪಡೆದುಕೊಂಡಿದ್ದ ಕೊಡಗು 4ನೇ ಸ್ಥಾನಕ್ಕೆ ಏರಿಕೆ ಕಂಡಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…