sslc result
ಬೆಂಗಳೂರು : ಇಂದು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ. ಜತೆಗೆ ಈ ಬಾರಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಟಾಪರ್ ಆಗಿದ್ದಾರೆ.
ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸಿದರು. ಈ ಫಲಿತಾಂಶವನ್ನು ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಅಧಿಕೃತ ಜಾಲತಾಣದ ಲಿಂಕ್ www.karresults.nic.in ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.
ಪರೀಕ್ಷೆ ಬರೆದ 7,70,209 ಲಕ್ಷ ಮಕ್ಕಳಲ್ಲಿ 7,26,794 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಬಾರಿ ಬರೋಬ್ಬರಿ ಶೇಕಡಾ 94.10 ರಷ್ಟು ಫಲಿತಾಂಶ ಬಂದಿದೆ.
7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ
ಚಿಕ್ಕಮಗಳೂರಿನ ವೃಂದ, ಬೆಂಗಳೂರು ಉತ್ತರದ ಧನುಷ್, ಉಡುಪಿ ಜಿಲ್ಲೆಯ ಪ್ರೀತಂ, ರಾಯಚೂರು ಜಿಲ್ಲೆಯ ಸುಖದೇವ್ , ದಾವಣಗೆರೆಯ ಭರತ್, ಚಿಕ್ಕೋಡಿ ಪ್ರಾರ್ಥನಾ, ವಿಜಯಪುರದ ಸೌಜನ್ಯ ಎಂಬ ವಿದ್ಯಾರ್ಥಿಗಳು 625 ಕ್ಕೆ 625 ಪೂರ್ಣ ಅಂಕಗಳನ್ನು ಪಡೆದಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…