ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು, ತನ್ನನ್ನು ಬೆಂಗಳೂರಿಗೆ ಕರೆದು ಸನ್ಮಾನ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾಳೆ.
ಪತ್ರದಲ್ಲಿ, ಮುಖ್ಯಮಂತ್ರಿಯವರೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸ್ಥಾಪನೆಯ ರೂವಾರಿ ಎಂಬುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಾಳೆ. ಈ ಶಾಲೆಗಳಿಂದ ಅನೇಕ ಬಡ ಪ್ರತಿಭೆಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿದೆ ಎಂದು ವರ್ಣಿಸಿದ್ದಾಳೆ.
ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಂಕಿತಾರನ್ನು ಬೆಂಗಳೂರಿಗೆ ಕರೆಸಿಕೊಂಡು ಸನ್ಮಾನಿಸಿ, ಆಕೆಯ ಮುಂದಿನ ಶಿಕ್ಷಣಕ್ಕೆ ಪ್ರೋತ್ಸಾಹಧನ ನೀಡಿದ್ದರು. ತನಗೆ ದೊರೆತ ಸತ್ಕಾರ, ಮುಂದಿನ ವಿದ್ಯಾಭ್ಯಾಸಕ್ಕೆ ಸಿಕ್ಕ ನೆರವಿಗೆ ಅಂಕಿತಾರವರು ಸಿಎಂಗೆ ಧನ್ಯವಾದ ತಿಳಿಸಿ ಈ ಪತ್ರ ಬರೆದಿದ್ದಾಳೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…