ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು, ತನ್ನನ್ನು ಬೆಂಗಳೂರಿಗೆ ಕರೆದು ಸನ್ಮಾನ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾಳೆ.
ಪತ್ರದಲ್ಲಿ, ಮುಖ್ಯಮಂತ್ರಿಯವರೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸ್ಥಾಪನೆಯ ರೂವಾರಿ ಎಂಬುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಾಳೆ. ಈ ಶಾಲೆಗಳಿಂದ ಅನೇಕ ಬಡ ಪ್ರತಿಭೆಗಳಿಗೆ ಶಿಕ್ಷಣ ದೊರಕಿ, ಬಾಳಿಗೆ ದಾರಿದೀಪವಾಗಿದೆ ಎಂದು ವರ್ಣಿಸಿದ್ದಾಳೆ.
ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಂಕಿತಾರನ್ನು ಬೆಂಗಳೂರಿಗೆ ಕರೆಸಿಕೊಂಡು ಸನ್ಮಾನಿಸಿ, ಆಕೆಯ ಮುಂದಿನ ಶಿಕ್ಷಣಕ್ಕೆ ಪ್ರೋತ್ಸಾಹಧನ ನೀಡಿದ್ದರು. ತನಗೆ ದೊರೆತ ಸತ್ಕಾರ, ಮುಂದಿನ ವಿದ್ಯಾಭ್ಯಾಸಕ್ಕೆ ಸಿಕ್ಕ ನೆರವಿಗೆ ಅಂಕಿತಾರವರು ಸಿಎಂಗೆ ಧನ್ಯವಾದ ತಿಳಿಸಿ ಈ ಪತ್ರ ಬರೆದಿದ್ದಾಳೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…