ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ | ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.10ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಮ್ಯಾಜಿಸ್ಟೇಟ್‌ ತನಿಖಗೆ ಆದೇಶ ನೀಡಲಾಗಿದೆ ಎಂದ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯ ಇತರ ಮುಖ್ಯಂಶಗಳು ಹೀಗಿವೆ…
ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರ ಇದಕ್ಕಾಗಿ ಬಹಳ ದುಃಖ ವ್ಯಕ್ತಪಡಿಸುತ್ತದೆ.

ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು.

ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ.

ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ; ಅವರ ಕುಟುಂಬ ವರ್ಗ, ವಾರೀಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

19 mins ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

1 hour ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

1 hour ago

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

2 hours ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

2 hours ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

3 hours ago