ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ | ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.10ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಮ್ಯಾಜಿಸ್ಟೇಟ್‌ ತನಿಖಗೆ ಆದೇಶ ನೀಡಲಾಗಿದೆ ಎಂದ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯ ಇತರ ಮುಖ್ಯಂಶಗಳು ಹೀಗಿವೆ…
ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರ ಇದಕ್ಕಾಗಿ ಬಹಳ ದುಃಖ ವ್ಯಕ್ತಪಡಿಸುತ್ತದೆ.

ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು.

ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ.

ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ; ಅವರ ಕುಟುಂಬ ವರ್ಗ, ವಾರೀಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

15 mins ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

25 mins ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

38 mins ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

2 hours ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

3 hours ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

4 hours ago