Stampede case CAT lifts Vikas Kumar's suspension
ಬೆಂಗಳೂರು : ಐಪಿಎಸ್ ಅಧಿಕಾರಿ ವಿಕಾಸ್ಕುಮಾರ್ ಅವರ ಅಮಾನತ್ತು ಆದೇಶವನ್ನು ಕೇಂದ್ರ ಆಡಳಿತ ನ್ಯಾಯಾಧಿಕರಣ(ಸಿಎಟಿ) ರದ್ದುಗೊಳಿಸಿದ್ದು, ಈ ಹಿಂದಿನ ಭತ್ಯೆ ಹಾಗೂ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದೆ.
ಜೂ.3 ರಂದು ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ಸಂಬಂಧ ಕಠಿಣ ಕ್ರಮ ಕೈಗೊಂಡಿದ್ದ ಸರ್ಕಾರ ಬೆಂಗಳೂರಿನ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ಕುಮಾರ್, ಕೇಂದ್ರ ವಲಯದ ಡಿಸಿಪಿ ಎಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್ಪಾರ್ಕ್ನ ಇನ್ಸ್ಪೆಕ್ಟರ್ ಎ.ಕೆ.ಗಿರೀಶ್ ಅವರನ್ನು ಜೂ.5 ರಂದು ಅಮಾನತ್ತುಗೊಳಿಸಿತ್ತು.
ಈ ಆದೇಶವನ್ನು ವಿಕಾಸ್ಕುಮಾರ್ ಅವರು ಕೇಂದ್ರ ನ್ಯಾಯಾಧಿಕರಣ(ಸಿಎಟಿ)ದಲ್ಲಿ ಪ್ರಶ್ನಿಸಿದ್ದರು. ತೀರ್ಪು ನೀಡಿರುವ ಸಿಎಟಿ ನ್ಯಾ.ಬಿ.ಕೆ.ಶ್ರೀವಾಸ್ತವ ಮತ್ತು ಸಂತೋಷ್ ಮೆಹ್ರಾ ಅವರನ್ನೊಳಗೊಂಡ ಪೀಠ ಅಮಾನತ್ತು ಆದೇಶವನ್ನು ರದ್ದುಗೊಳಿಸಿದೆ.
ಹಿಂದಿನ ಎಲ್ಲಾ ಭತ್ಯೆ ಹಾಗೂ ಸೌಲಭ್ಯಗಳನ್ನು ಮುಂದುವರೆಸಲು ನಿರ್ದೇಶನ ನೀಡಿದೆ. ಉಳಿದ ಇಬ್ಬರು ಐಪಿಎಸ್ ಅಧಿಕಾರಿಗಳಾದ ಬಿ.ದಯಾನಂದ ಮತ್ತು ಎಚ್.ಟಿ.ಶೇಖರ್ರವರ ಅಮಾನತ್ತು ಆದೇಶವನ್ನು ಮರುಪರಿಶೀಲಿಸಲು ಸೂಚಿಸಿದೆ.
ವಿಕಾಸ್ಕುಮಾರ್ ರವರ ಪರವಾಗಿ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದರು. ಹಿಂದಿನ ವಿಚಾರಣೆಯಲ್ಲಿ ಸಿಎಟಿ ರಾಜ್ಯಸರ್ಕಾರಕ್ಕೆ ನೋಟೀಸ್ ನೀಡಿತ್ತು. ಆಕ್ಷೇಪಣೆ ಸಲ್ಲಿಸಲು ಅಡ್ವೊಕೇಟ್ ಜನರಲ್ ಕಾಲವಕಾಶ ಕೋರಿದ್ದರು. ಇಂದಿನ ವಿಚಾರಣೆಯಲ್ಲಿ ತೀರ್ಪು ಪ್ರಕಟವಾಗಿದೆ. ಅಮಾನತ್ತು ಆದೇಶವನ್ನು ಸಿಎಟಿ ರದ್ದು ಮಾಡಿದ್ದರಿಂದಾಗಿ ರಾಜ್ಯಸರ್ಕಾರಕ್ಕೆ ಮುಖಭಂಗವಾದಂತಾಗಿದೆ.
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…