Stampede case CAT lifts Vikas Kumar's suspension
ಬೆಂಗಳೂರು : ಐಪಿಎಸ್ ಅಧಿಕಾರಿ ವಿಕಾಸ್ಕುಮಾರ್ ಅವರ ಅಮಾನತ್ತು ಆದೇಶವನ್ನು ಕೇಂದ್ರ ಆಡಳಿತ ನ್ಯಾಯಾಧಿಕರಣ(ಸಿಎಟಿ) ರದ್ದುಗೊಳಿಸಿದ್ದು, ಈ ಹಿಂದಿನ ಭತ್ಯೆ ಹಾಗೂ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದೆ.
ಜೂ.3 ರಂದು ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ಸಂಬಂಧ ಕಠಿಣ ಕ್ರಮ ಕೈಗೊಂಡಿದ್ದ ಸರ್ಕಾರ ಬೆಂಗಳೂರಿನ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ಕುಮಾರ್, ಕೇಂದ್ರ ವಲಯದ ಡಿಸಿಪಿ ಎಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್ಪಾರ್ಕ್ನ ಇನ್ಸ್ಪೆಕ್ಟರ್ ಎ.ಕೆ.ಗಿರೀಶ್ ಅವರನ್ನು ಜೂ.5 ರಂದು ಅಮಾನತ್ತುಗೊಳಿಸಿತ್ತು.
ಈ ಆದೇಶವನ್ನು ವಿಕಾಸ್ಕುಮಾರ್ ಅವರು ಕೇಂದ್ರ ನ್ಯಾಯಾಧಿಕರಣ(ಸಿಎಟಿ)ದಲ್ಲಿ ಪ್ರಶ್ನಿಸಿದ್ದರು. ತೀರ್ಪು ನೀಡಿರುವ ಸಿಎಟಿ ನ್ಯಾ.ಬಿ.ಕೆ.ಶ್ರೀವಾಸ್ತವ ಮತ್ತು ಸಂತೋಷ್ ಮೆಹ್ರಾ ಅವರನ್ನೊಳಗೊಂಡ ಪೀಠ ಅಮಾನತ್ತು ಆದೇಶವನ್ನು ರದ್ದುಗೊಳಿಸಿದೆ.
ಹಿಂದಿನ ಎಲ್ಲಾ ಭತ್ಯೆ ಹಾಗೂ ಸೌಲಭ್ಯಗಳನ್ನು ಮುಂದುವರೆಸಲು ನಿರ್ದೇಶನ ನೀಡಿದೆ. ಉಳಿದ ಇಬ್ಬರು ಐಪಿಎಸ್ ಅಧಿಕಾರಿಗಳಾದ ಬಿ.ದಯಾನಂದ ಮತ್ತು ಎಚ್.ಟಿ.ಶೇಖರ್ರವರ ಅಮಾನತ್ತು ಆದೇಶವನ್ನು ಮರುಪರಿಶೀಲಿಸಲು ಸೂಚಿಸಿದೆ.
ವಿಕಾಸ್ಕುಮಾರ್ ರವರ ಪರವಾಗಿ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದರು. ಹಿಂದಿನ ವಿಚಾರಣೆಯಲ್ಲಿ ಸಿಎಟಿ ರಾಜ್ಯಸರ್ಕಾರಕ್ಕೆ ನೋಟೀಸ್ ನೀಡಿತ್ತು. ಆಕ್ಷೇಪಣೆ ಸಲ್ಲಿಸಲು ಅಡ್ವೊಕೇಟ್ ಜನರಲ್ ಕಾಲವಕಾಶ ಕೋರಿದ್ದರು. ಇಂದಿನ ವಿಚಾರಣೆಯಲ್ಲಿ ತೀರ್ಪು ಪ್ರಕಟವಾಗಿದೆ. ಅಮಾನತ್ತು ಆದೇಶವನ್ನು ಸಿಎಟಿ ರದ್ದು ಮಾಡಿದ್ದರಿಂದಾಗಿ ರಾಜ್ಯಸರ್ಕಾರಕ್ಕೆ ಮುಖಭಂಗವಾದಂತಾಗಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…