ರಾಜ್ಯ

ಕಾಲ್ತುಳಿತ ಪ್ರಕರಣ | ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡಿರುವ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿ, ಮುಂದಿನ ಅರ್ಜಿ ವಿಚಾರಣೆಯನ್ನು ಜೂನ್.10ಕ್ಕೆ ಮುಂದೂಡಿದೆ.

ಘಟನೆಯ ಬಗ್ಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ನೋಟೀಸ್ ಜಾರಿಗೊಳಿಸಿದ ಪೀಠ ಜೂನ್ 10 ಕ್ಕೆ ಮುಂದಿನ ಅರ್ಜಿ ವಿಚಾರಣೆಯನ್ನು ಮುಂದೂಡಿತು.

ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವೇರ ರಾವ್ ಹಾಗೂ ಸಿ.ಎಂ ಜೋಶಿ ಅವರಿದ್ದ ವಿಭಾಗೀಯ ಪೀಠದಲ್ಲಿ ಸ್ವಯಂ ದೂರು ದಾಖಲಾಗಿತ್ತು. ಮಧ್ಯಾಹ್ನದ ನಂತರ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ದುರ್ಘಟನೆಗೆ ಕಾರಣ ಏನು..?ಘಟನೆ ಬಳಿಕ ತೆಗೆದುಕೊಂಡ ಕ್ರಮಗಳೇನು?ಮುಂದಿನ ವಿಚಾರಣೆಗೆ ಪ್ರಗತಿ ವರದಿ ಸಲ್ಲಿಕೆಗೆ ಎ ಜಿ ಅವರಿಗೆ ಸೂಚಿಸಿದರು.

ಬಿಸಿಐಗೆ, ಐಪಿಎಲ್ ಆಯೋಜನೆ ಮಾಡಿದ್ದವರಿಗೆ ನೊಟೀಸ್ ನೀಡುವಂತೆ ವಕೀಲರು ಮನವಿ ಮಾಡಿದರು. ಸರ್ಕಾರದ ಪ್ರಗತಿ ವರದಿ ಸಲ್ಲಿಸಲಿ. ಆಮೇಲೆ ನಿಮ್ಮ ವಾದವನ್ನ ಆಲಿಸುತ್ತೇನೆ ಎಂದು ನ್ಯಾಯಾಧೀಶರು ಹೇಳಿದರು.

ಬುಧವಾರ ನಡೆದ ದುರ್ಘಟನೆ ಸಂಬಂಧ ಸ್ವಯೋಪ್ರೇರಿತ ದೂರು ದಾಖಲಿಸಿಕೊಂಡಿರುವ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದೆ. ಯಾವ ರೀತಿಯ ಮೆಡಿಕಲ್ ಫೆಸಿಲಿಟಿ ಮಾಡಲಾಗಿತ್ತು? ಇಂತಹ ಘಟನೆ ನಡೆದಾಗ ಯಾವೆಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೀರಿ? ಏನಾದರೂ ಎಸ್‌ಒಪಿ ಮಾಡಿಕೊಂಡಿದ್ರಾ? ಇಂತಹ ಕಾರ್ಯಕ್ರಗಳನ್ನು ಮಾಡುವಾಗ ನಿಯಮಗಳನ್ನು ತರಬೇಕು. ನೀವು ಈ ಕೆಲಸವನ್ನು ಮಾಡಿದ್ರಾ? ಎಂದು ಕೋರ್ಟ್‌ ಪ್ರಶ್ನೆಗಳನ್ನು ಮಾಡಿದೆ.

ಮೆಡಿಕಲ್, ಫೈರ್ ಬ್ರಿಗೇಡ್ ಎಲ್ಲಾ ರೀತಿಯ ವ್ಯವಸ್ಥೆ ಇರಬೇಕು. ಈ ವ್ಯವಸ್ಥೆಯನ್ನು ಮಾಡಿಕೊಂಡಿದ್ರಾ? ಹೀಗೆ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದರು. ಅಲ್ಲದೆ, ಮುಂದುವರೆದು ಅವರು ಈ ಘಟನೆಗೆ ಯಾರು ಹೊಣೆ?, ಕ್ರಿಕೇಟ್ ಅಸೋಸಿಯೇಷನ್ಮಾ? ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಾ? ಅಂತಲೂ ಪ್ರಶ್ನಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಟ್ಟು 21 ಗೇಟ್‌ಗಳಿವೆ. ಆದರೆ 3 ಅನ್ನು ಮಾತ್ರ ಓಪನ್ ಮಾಡಿದ್ದು ಯಾಕೆ ಎಂಬ ಪ್ರಶ್ನೆಗಳನ್ನು ಸಿಜೆ ಅವರು ಕೇಳಿದ್ದಾರೆ. ಕೊನೆಗೆ ಇದೆಲ್ಲಕ್ಕೂ ಸಮಗ್ರ ವರದಿ ಕೊಡಬೇಕು ಎಂದು ಅರ್ಜಿ ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿಕೆ ಮಾಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅನಿರೀಕ್ಷಿ ಘಟನೆ ನಡೆದಿದ್ದು, 11 ಮಂದಿ ಸಾವನ್ನಪ್ಪಿ, 56 ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ಮಾಧ್ಯಮಗಳು ವರದಿ ಮಾಡಿವೆ. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲು ಹಲವು ಮಂದಿ ಮೇಲ್ ಮೂಲಕ ಮನವಿ ಮಾಡಿದ್ದಾರೆ. ಘಟನೆ ಗಂಭೀರವಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೀಠ ತಿಳಿಸಿದೆ.

ಸರ್ಕಾರದ ಪರ ಎಜಿ ಕೋರ್ಟ್​ಗೆ ಹೇಳಿದ್ದೇನು?
ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ, ಹೈಕೋರ್ಟ್ ನೀಡುವ ಸಲಹೆಗಳನ್ನು ಪಾಲಿಸಲು ಸರ್ಕಾರ ಬದ್ಧವಾಗಿದೆ. ನಾವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪ್ರತಿರೋಧಿಸುವುದಿಲ್ಲ ಜೂನ್ 3ರಂದು ಆರ್‌ಸಿಬಿ ಐಪಿಎಲ್ ಮ್ಯಾಚ್ ಗೆಲುವು ಸಾಧಿಸಿತು. ಭದ್ರತೆಗಾಗಿ ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದರು. ಬಂದೋಬಸ್ತ್​ ಗಾಗಿ 1,643 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. ವಾಟರ್ ಟ್ಯಾಂಕರ್, ಕೆಎಸ್‌ಆರ್​ಪಿ ತುಕಡಿ ಸೇರಿದಂತೆ ಹಲವು ವ್ಯವಸ್ಥೆ ಮಾಡಲಾಗಿತ್ತು. ನಿನ್ನೆ 1,600 ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಕಾಲ್ತುಳಿತ ಸಂಭವಿಸಿ 56 ಜನರು ಗಾಯಗೊಂಡಿದ್ದರು. ಐವರು ಮಹಿಳೆಯರು ಹಾಗೂ 6 ಪುರುಷರು ಮೃತಪಟ್ಟಿದ್ದಾರೆ. ಕೋಲಾರ, ಉತ್ತರ ಕನ್ನಡ, ತುಮಕೂರು, ಯಾದಗಿರಿ, ಮಂಡ್ಯದಿಂದಲೂ ಬೆಂಗಳೂರಿಗೆ ಜನ ಬಂದಿದ್ದರು. ಒಟ್ಟು ನಿನ್ನೆ ಬೆಂಗಳೂರಿಗೆ 2.5 ಲಕ್ಷ ಜನರು ಬಂದಿದ್ದರು ಎಂದು ಕೋರ್ಟ್​ಗೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

35 mins ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

38 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

42 mins ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

48 mins ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

52 mins ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

58 mins ago