stemped
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಮಾಹಿತಿಯನ್ನು ರಾಜ್ಯಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.
ಕಬ್ಬನ್ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಟ್ಟು 11 ಮಂದಿ ಮೃತಪಟ್ಟಿದ್ದು, ಅವರಲ್ಲಿ ವೈದ್ಯರು, ಚಾರ್ಟೆಡ್ ಅಕೌಂಟೆಂಟ್ಗಳು, ಎಂಜಿನಿಯರ್ಗಳು, ಎಂಜಿನಿಯರ್ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದು ದುರಂತ ಜನಮಾನಸದ ಮನಕಲಕುವಂತಿದೆ.
ಬೆಂಗಳೂರಿನ ಯಲಹಂಕದ ಕಟ್ಟಿಗೇನಹಳ್ಳಿಯ ದಿವ್ಯಾಂಶಿ(14), ಉತ್ತರ ಕನ್ನಡ ಜಿಲ್ಲೆಯ ರವೀಂದ್ರ ನಗರ ನಿವಾಸಿ ಅಕ್ಷತಾ ಪೈ(26), ಬೆಂಗಳೂರಿನ ಎಂ.ಎಸ್.ರಾಮಯ್ಯ ಬಡಾವಣೆಯ ಭೂಮಿಕ್(19), ಕೋಲಾರದ ಎಸ್.ವಿ.ಲೇಔಟ್ನ ಸಹನಾ(23), ಬೆಂಗಳೂರಿನ ದೊಡ್ಡಕಲ್ಲಸಂದ್ರದ ನಾರಾಯಣನಗರ ನಿವಾಸಿ ಚಿನ್ಮಯಶೆಟ್ಟಿ(19), ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಡಿಯೂರು ಸಮೀಪದ ನಾಗಸಂದ್ರದ ಮನೋಜ್ಕುಮಾರ್(20), ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುಡಟಹಳ್ಳಿಯ ಕೆ.ಟಿ.ಶ್ರವಣ(20), ಯಾದಗಿರಿ ಜಿಲ್ಲೆ ಹೂನಿಗೇರಿ ಗ್ರಾಮದ ಶಿವಲಿಂಗ(17), ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ರಾಯಸಮುದ್ರ ಗ್ರಾಮದ ಪೂರ್ಣಚಂದ್ರ(20), ತಮಿಳುನಾಡು ಕೊಯಮತ್ತೂರಿನ ಉರುಮಲಪೇಟ್ನ ಕಾಮಾಕ್ಷಿದೇವಿ(19), ಬೆಂಗಳೂರಿನ ಯಲಹಂಕದ ನ್ಯೂಟೌನ್ನ ಚಿಕ್ಕಬೊಮಸಂದ್ರ ಕ್ರಾಸ್ ಬಳಿಯ ನಿವಾಸಿ ಪ್ರಜ್ವಲ್(22) ಮೃತಪಟ್ಟಿದ್ದಾರೆ.
ಗಾಯಾಳುಗಳ ವಿವರ:
ದೀಪಕ್ ಕೆ.ಸಿ., ಸಂಪತ್ ಕುಮಾರ್ ಸಹಿತ 5 ಮಂದಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪರ್ಶ ಆಸ್ಪತ್ರೆಯಲ್ಲಿ 5 ಮಂದಿ, ವೈದೇಹಿ ಆಸ್ಪತ್ರೆಯಲ್ಲಿ 14 ಮಂದಿ, ಬೌರಿಂಗ್ ಆಸ್ಪತ್ರೆಯಲ್ಲಿ 18 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…