ರಾಜ್ಯ

ಕಾಲ್ತುಳಿತ ಪ್ರಕರಣ: ಮೃತರ ಮಾಹಿತಿ ಪ್ರಕಟಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಮಾಹಿತಿಯನ್ನು ರಾಜ್ಯಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.

ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಟ್ಟು 11 ಮಂದಿ ಮೃತಪಟ್ಟಿದ್ದು, ಅವರಲ್ಲಿ ವೈದ್ಯರು, ಚಾರ್ಟೆಡ್ ಅಕೌಂಟೆಂಟ್‍ಗಳು, ಎಂಜಿನಿಯರ್‌ಗಳು, ಎಂಜಿನಿಯರ್ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದು ದುರಂತ ಜನಮಾನಸದ ಮನಕಲಕುವಂತಿದೆ.

ಬೆಂಗಳೂರಿನ ಯಲಹಂಕದ ಕಟ್ಟಿಗೇನಹಳ್ಳಿಯ ದಿವ್ಯಾಂಶಿ(14), ಉತ್ತರ ಕನ್ನಡ ಜಿಲ್ಲೆಯ ರವೀಂದ್ರ ನಗರ ನಿವಾಸಿ ಅಕ್ಷತಾ ಪೈ(26), ಬೆಂಗಳೂರಿನ ಎಂ.ಎಸ್.ರಾಮಯ್ಯ ಬಡಾವಣೆಯ ಭೂಮಿಕ್(19), ಕೋಲಾರದ ಎಸ್.ವಿ.ಲೇಔಟ್‍ನ ಸಹನಾ(23), ಬೆಂಗಳೂರಿನ ದೊಡ್ಡಕಲ್ಲಸಂದ್ರದ ನಾರಾಯಣನಗರ ನಿವಾಸಿ ಚಿನ್ಮಯಶೆಟ್ಟಿ(19), ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಡಿಯೂರು ಸಮೀಪದ ನಾಗಸಂದ್ರದ ಮನೋಜ್‍ಕುಮಾರ್(20), ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುಡಟಹಳ್ಳಿಯ ಕೆ.ಟಿ.ಶ್ರವಣ(20), ಯಾದಗಿರಿ ಜಿಲ್ಲೆ ಹೂನಿಗೇರಿ ಗ್ರಾಮದ ಶಿವಲಿಂಗ(17), ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ರಾಯಸಮುದ್ರ ಗ್ರಾಮದ ಪೂರ್ಣಚಂದ್ರ(20), ತಮಿಳುನಾಡು ಕೊಯಮತ್ತೂರಿನ ಉರುಮಲಪೇಟ್‍ನ ಕಾಮಾಕ್ಷಿದೇವಿ(19), ಬೆಂಗಳೂರಿನ ಯಲಹಂಕದ ನ್ಯೂಟೌನ್‍ನ ಚಿಕ್ಕಬೊಮಸಂದ್ರ ಕ್ರಾಸ್ ಬಳಿಯ ನಿವಾಸಿ ಪ್ರಜ್ವಲ್(22) ಮೃತಪಟ್ಟಿದ್ದಾರೆ.

ಗಾಯಾಳುಗಳ ವಿವರ:
ದೀಪಕ್ ಕೆ.ಸಿ., ಸಂಪತ್ ಕುಮಾರ್ ಸಹಿತ 5 ಮಂದಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪರ್ಶ ಆಸ್ಪತ್ರೆಯಲ್ಲಿ 5 ಮಂದಿ, ವೈದೇಹಿ ಆಸ್ಪತ್ರೆಯಲ್ಲಿ 14 ಮಂದಿ, ಬೌರಿಂಗ್ ಆಸ್ಪತ್ರೆಯಲ್ಲಿ 18 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago