Mysore
26
broken clouds

Social Media

ಶನಿವಾರ, 08 ಆಗಸ್ಟ್ 2026
Light
Dark

ಕಾಲ್ತುಳಿತ ದುರಂತ ಪ್ರಕರಣ: ವಾಸ್ತವ ಸಂಗತಿ ಬಗ್ಗೆ ಕೋರ್ಟ್‌ಗೆ ವರದಿ ನೀಡುತ್ತೇವೆ ಎಂದ ಪರಮೇಶ್ವರ್‌

_G Parameshwara-news

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ತವ ಸಂಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಹೈಕೋರ್ಟ್‌ನಲ್ಲಿ ಪಿಐಎಲ್‌ ಅರ್ಜಿ ವಿಚಾರಣೆ ನಡೆಯಲಿದೆ. ಕಾಲ್ತುಳಿತ ದುರಂತದ ಬಗ್ಗೆ ವಾಸ್ತವ ಸಂಗತಿ ಏನಿದೆ ಎಂದು ನ್ಯಾಯಾಲಯಕ್ಕೆ ವರದಿ ಕೊಡುತ್ತೇವೆ. ಸರ್ಕಾರದ ಪರ ಏನು ಹೇಳಬೇಕು ಎಂಬುದರ ಬಗ್ಗೆ ನಿನ್ನೆಯೇ ಚರ್ಚೆಯಾಗಿದೆ ಎಂದರು.

ಇನ್ನು ಸಿಎಂ ಹಾಗೂ ಡಿಸಿಎಂ ದೆಹಲಿಗೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೈಕಮಾಂಡ್‌ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದಾರೆ. ನನ್ನನ್ನು ದೆಹಲಿಗೆ ಕರೆದಿಲ್ಲ. ಹೈಕಮಾಂಡ್‌ ಕರೆದರೆ ಹೋಗುತ್ತೇನೆ ಎಂದು ಹೇಳಿದರು.

Tags:
error: Content is protected !!