ರಾಜ್ಯ

ಕಾಲ್ತುಳಿತ ದುರಂತ : ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೋರಿದ್ದಾರೆ.

ಈ ಕುರಿತು ಅವರು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ದಿನದಂದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಯುವಜನರು ಮೃತಪಟ್ಟಿದ್ದಾರೆ. 75 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಜನರ ಸುರಕ್ಷತೆಯ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಹಾಗೂ ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದು ಕಂಡುಬಂದಿದೆ ಎಂದು ಆರ್‌.ಅಶೋಕ ಪತ್ರದಲ್ಲಿ ದೂರಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 35 ಸಾವಿರ ಜನರು ಹೋಗಬಹುದು. ಆದರೆ ಉಚಿತ ಪಾಸ್‌ ಹಾಗೂ ತಪ್ಪಾದ ಘೋಷಣೆ/ಪ್ರಕಟಣೆಗಳಿಂದಾಗಿ ಅತ್ಯಧಿಕ ಸಂಖ್ಯೆಯಲ್ಲಿ ಜನರು ಬಂದು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಇಂತಹ ಬೃಹತ್‌ ಕಾರ್ಯಕ್ರಮದಲ್ಲಿ ಪೊಲೀಸ್‌ ಹಾಗೂ ಭದ್ರತಾ ಸಿಬ್ಬಂದಿಯ ಕೊರತೆ ಕೂಡ ಇತ್ತು. ಆಂಬ್ಯುಲೆನ್ಸ್‌, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ತಪ್ಪಿನಲ್ಲಿ ಆರ್‌ಸಿಬಿ, ಡಿಎನ್‌ಎ ಹಾಗೂ ಕ್ರಿಕೆಟ್‌ ಅಸೋಸಿಯೇಶನ್‌ನ ಪಾತ್ರವೂ ಇದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಈ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಹಾಗೂ ಸರ್ಕಾರಿ ಸಂಸ್ಥೆಗಳು ಯಾವುದೇ ಸಿದ್ಧತೆ ಮಾಡಿಕೊಳ್ಳದಿರುವುದು ಕಂಡುಬಂದಿದೆ. ಕಾರ್ಯಕ್ರಮಕ್ಕೆ ಬಂದವರಲ್ಲಿ ಹೆಚ್ಚಿನವರು ಯುವಜನರೇ ಆಗಿದ್ದು, ಅವರ ಸುರಕ್ಷತೆ ಹಾಗೂ ಬದುಕುವ ಹಕ್ಕನ್ನು ಕಿತ್ತುಕೊಂಡಂತಾಗಿದೆ. ಆದ್ದರಿಂದ ಈ ದುರಂತವನ್ನು ಸ್ವಯಂ ಪ್ರೇರಿತವಾಗಿ ದೂರಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆರ್‌.ಅಶೋಕ ಮನವಿ ಮಾಡಿದ್ದಾರೆ.

ಸರ್ಕಾರದ ಇಲಾಖೆಗಳು, ಅಧಿಕಾರಿಗಳು ಹಾಗೂ ಖಾಸಗಿ ಸಂಸ್ಥೆಗಳ ಜವಾಬ್ದಾರಿ ಹಾಗೂ ಪಾತ್ರದ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ತನಿಖೆ ಮಾಡಬೇಕಿದೆ. ತಪ್ಪು ಯಾರದ್ದು ಎಂದು ಪತ್ತೆ ಮಾಡಿ, ಹೊಣೆಗಾರಿಕೆಯನ್ನು ಗುರುತಿಸಿ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿದೆ. ಹಾಗೆಯೇ ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ವಹಿಸಲು, ಸಾರ್ವಜನಿಕ ಕಾರ್ಯಕ್ರಮಗಳಿಗೆ ಸೂಕ್ತವಾದ ನಿಯಮ ಅಥವಾ ಮಾರ್ಗಸೂಚಿಯನ್ನು ನೀಡಬೇಕಿದೆ. ಈಗಾಗಲೇ ಸರ್ಕಾರದಿಂದ ತನಿಖೆ ನಡೆಯುತ್ತಿದ್ದರೂ, ಅದು ಪಾರದರ್ಶಕವಾಗಿರಲು, ಆಯೋಗದಿಂದ ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಬೇಕಿದೆ. ಹೀಗಾದರೆ ಮಾತ್ರ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ಇದು ನಿಜಕ್ಕೂ ತಡೆಯಬಹುದಾದ ದುರಂತರವಾಗಿತ್ತು. ಈಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಧ್ಯಪ್ರವೇಶದಿಂದಾಗಿ ನೊಂದ ಕುಟುಂಬಗಳಿಗೆ ನ್ಯಾಯ ಸಿಗುವುದರ ಜೊತೆಗೆ, ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬಹುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

5 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

5 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

5 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

5 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

14 hours ago