ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹಣ ದುರುಪಯೋಗ, ಬೆಲೆ ಏರಿಕೆ ಮತ್ತು ಆರ್ಥಿಕ ದುಸ್ಥಿತಿಯಿಂದ ರಾಜ್ಯ ದಿವಾಳಿಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸತತವಾಗಿ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರ ರಾಜ್ಯದ ಜನತೆ ಮೇಲೆ ಬರೆ ಎಳೆಯುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಆಸ್ತಿ ನೋಂದಣಿ ಶುಲ್ಕ-ಶೇ 60, ಆಸ್ತಿ ಮಾರ್ಗದರ್ಶನ ಮೌಲ್ಯಗಳು- ಶೇ 30, ವಾಹನ ನೋಂದಣಿ ಶುಲ್ಕ-ಶೇ 10, ಆಸ್ಪತ್ರೆ ಸೇವಾ ಶುಲ್ಕಗಳು-ಶೇ 5, ಸರ್ಕಾರಿ ಕಾಲೇಜು ಶುಲ್ಕಗಳು-ಶೇ 10, ಬೆಂಗಳೂರು ಮೆಟ್ರೋ ದರ- ಶೇ 50, ಜನನ ಮತ್ತು ಮರಣ ಪ್ರಮಾಣ ಪತ್ರಗಳ ಶುಲ್ಕ-ಶೇ 100 ಸೇರಿದಂತೆ ಇನ್ನಿತರ ಬೆಲೆ ಏರಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಬಾಕಿ ನೀಡಬೇಕಿರುವ 7,000 ಕೋಟಿ ರೂ. ನೀಡದೇ ಸಾರಿಗೆ ಸಂಸ್ಥೆ ಮುಚ್ಚುವ ಸ್ಥಿತಿಗೆ ತಲುಪಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…