ರಾಜ್ಯ

ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ‌ ಹೆಸರು ಕೇಳಿ ಬರುತ್ತಿದ್ದು, ಯಾರು ಅಧ್ಯಕ್ಷರು ಅಂತ ಬಹಿರಂಗವಾಗಿ ಹೇಳಲಿ. ದೆಹಲಿ ವರಿಷ್ಠರು ಒಂದು ಹೆಸರು ಬಿಟ್ಟು ಪ್ಲಸ್ ಮೈನಸ್ ನೋಡಿ ಅದು ಫೇಲ್ ಆಯಿತು ಅಂದ್ರೆ ಮತ್ತೆ ಬೇರೆ ಹೆಸರು ಬಿಟ್ಟು ಪ್ರಯೋಗ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಶೋಭಾ ಕರಂದ್ಲಾಜೆ ಊಹಾಪೋಹ ಅಂತ ಹೇಳಿದ್ದಾರೆ. ರಾಜ್ಯಧ್ಯಕ್ಷರನ್ನು, ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು

ಕಾಂಗ್ರೆಸ್ ಸರ್ಕಾರಕ್ಕೆ ಏನು ಆಗೋದಿಲ್ಲ. ಆದರೆ ಸಂಕ್ರಾಂತಿ ನಂತರ ಅಲ್ಲೋಲ ಕಲ್ಲೋಲ ಆಗುತ್ತೆ ಅಂತ ಆಶಾಭಾವನೆ ಮೂಡಿಸಿ ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು, ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತೆ. 104 ಇದ್ದಾಗಾಲೇ ಏನು ಮಾಡಲು ಆಗಿಲ್ಲ ಈಗ ಏನು ಮಾಡಲು ಸಾಧ್ಯ ಎಂದು ಸವಾಲು ಹಾಕಿದ್ದಾರೆ.

ಬೆಂಗಳೂರು ಸಾಕಷ್ಟು ಬೆಳವಣಿಗೆ ಆಗಿದೆ. ನೂರಾರು ಹಳ್ಳಿಗಳು ಬೆಂಗಳೂರಿಗೆ ಸೇರುತ್ತಿವೆ. ಇದಕ್ಕೆ ಕನಕಪುರ ಹೊರತಾಗಿಲ್ಲ. ಕನಕಪುರ ಬೆಂಗಳೂರು ಗ್ರಾಮೀಣದ ಒಂದು ಭಾಗ. ಸಹಜವಾಗಿ ಕನಕಪುರ ಬೆಂಗಳೂರು ನಗರಕ್ಕೆ ಸೇರಿದೆ ಎನ್ನುವುದರಲ್ಲಿ ಆಶ್ಚರ್ಯಪಡುವಂತಹ ವಿಚಾರ ಏನಿದೆ. ಇದಕ್ಕೆ ವಿಶೇಷ ಕಾಮೆಂಟ್ ಮಾಡುವ ಅವಶ್ಯಕತೆ ಇಲ್ಲ. ಡಿಕೆಶಿ ಕನಕಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ ಹೊರತು ಜಿಲ್ಲೆಯ ಬಗ್ಗೆ ಹೇಳಿಲ್ಲ ಎಂದರು.

ಡಿಕೆಶಿ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ. ಈ ರೀತಿ ಹೇಳಿಕೆ ಮುಖಾಂತರ ಅಭಿವೃದ್ಧಿಗೆ ಒತ್ತು ನೀಡುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಎಲ್ಲವನ್ನೂ ರಾಜಕೀಯ ಮಾಡುವುದು ಸ್ಟಾರ್ಟ್ ಆಗಿದೆ. ಇದನ್ನು ಬಿಟ್ಟು ಇಡೀ ವ್ಯವಸ್ಥೆ ಅನುಕೂಲ ಆಗುವುದನ್ನು ನೋಡಬೇಕು ಎಂದರು.

ಕುಮಾರಸ್ವಾಮಿ ಏನೇ ಟಿಕೆ ಮಾಡಿದರು ಅದಕ್ಕೆ ಪುರಾವೆ ಇರಬೇಕು. ಜಾರ್ಜ್ ಮನೆಯಲ್ಲಿ ಸಿದ್ದರಾಮಯ್ಯ ಏನು ಮಾಡಿದರು ಅಂತ ಪ್ರಶ್ನೆ ಮಾಡಿದ್ರೆ ಅದು ಪ್ರಶ್ನೆಯಾಗಿಯೇ ಉಳಿಯಲಿದೆ. ಪೆನ್ ಡ್ರೈವ್ ವಿಚಾರದಲ್ಲಿಯೂ‌ ಇದೆ ಆಯಿತು. ಟೀಕೆ ಮಾಡುವ ಸಲುವಾಗಿ ಟ್ವೀಟ್ ಮಾಡಿದ್ರೆ ಅದರಿಂದ ಏನು ಉಪಯೋಗ ಆಗಲ್ಲ. ಮಾಧ್ಯಮದಲ್ಲಿ ಚರ್ಚೆ ಆಗುತ್ತೆ ಹೊರೆತು ವಾಸ್ತವವಾಗಿ ಏನು ಗೊತ್ತಾಗುವುದಿಲ್ಲ ಎಂದು ಹೇಳಿದರು.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago