ರಾಜ್ಯ

ರಾಜ್ಯ ಬಿಜೆಪಿ ಕೇಂದ್ರದ ವಿರುದ್ದ ಪ್ರತಿಭಟಿಸಲಿ : ಸಚಿವೆ ಹೆಬ್ಬಾಳಕರ್‌

  • ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ
  • ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ

ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ, ಹಾಲಿನ ದರ ಏರಿಸಿರುವುದರಿಂದ ರೈತರಿಗೆ ಅನುಕೂಲ ಆಗಿದೆ ಎಂದು ತಿರುಗೇಟು ನೀಡಿದರು.

ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿದ್ದಾರೆ, ರಾಜ್ಯಕ್ಕೆ ನ್ಯಾಯಕೊಡಿಸಲಿ. ನಮ್ಮ ಹಕ್ಕು ನಮ್ಮ ತೆರಿಗೆ ಅಂತ ಹೋರಾಟ ಮಾಡಿದರೂ ಪ್ರಯೋಜವಾಗಲಿಲ್ಲ. ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗೆ ಇದ್ಯಾ?. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದರೆ ಪ್ರಯೋಜನವಿಲ್ಲ. ಕೇಂದ್ರದಲ್ಲಿ ಪ್ರಶ್ನಿಸಲಾಗದ ನಾಯಕರು ಈಗ ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಲು ಮುಂದಾಗಿರುವುದು ಹಾಸ್ಯಸ್ಪದ ಎಂದು ಸಚಿವರು ತಿಳಿಸಿದರು.

ಬಿಜೆಪಿ ಸರ್ಕಾರ ಕಡೇ ದಿನಗಳಲ್ಲಿ ಮಾಡಿದ ತಪ್ಪಿನಿಂದಾಗಿ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಕ್ಕ ಸಿಕ್ಕಂತೆ ಟೆಂಡರ್ ಮಾಡಿ, ಯಾವುದೇ ಹಣ ಬಿಡುಗಡೆ ಮಾಡದೇ ಹೋದರು. ಇದೀಗ ಹಣ ಬಿಡುಗಡೆ ಮಾಡಿ ಅಂತ ನಮ್ಮನ್ನು ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಕಷ್ಟಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ ಎಂದು ದೂರಿದರು.

ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ
ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿರುವ ಪಕ್ಷ. ಸರ್ವಜನಾಂಗಕ್ಕೂ ಬೇಕಾಗಿರುವ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗೃಹಲಕ್ಷ್ಮಿ ಹಣ ಬಿಡುಗಡೆ
ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವೂ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಜೊತೆಗೆ ಫೆಬ್ರವರಿ ತಿಂಗಳ ಹಣ ಕೂಡ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫೆಬ್ರವರಿ ತಿಂಗಳ ಹಣ ಸಂದಾಯವಾಗಲಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

1 hour ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

1 hour ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

2 hours ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

2 hours ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

6 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

6 hours ago