ರಾಜ್ಯ

ರಾಜ್ಯ ಬಿಜೆಪಿ ಕೇಂದ್ರದ ವಿರುದ್ದ ಪ್ರತಿಭಟಿಸಲಿ : ಸಚಿವೆ ಹೆಬ್ಬಾಳಕರ್‌

  • ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ
  • ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ

ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ, ಹಾಲಿನ ದರ ಏರಿಸಿರುವುದರಿಂದ ರೈತರಿಗೆ ಅನುಕೂಲ ಆಗಿದೆ ಎಂದು ತಿರುಗೇಟು ನೀಡಿದರು.

ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿದ್ದಾರೆ, ರಾಜ್ಯಕ್ಕೆ ನ್ಯಾಯಕೊಡಿಸಲಿ. ನಮ್ಮ ಹಕ್ಕು ನಮ್ಮ ತೆರಿಗೆ ಅಂತ ಹೋರಾಟ ಮಾಡಿದರೂ ಪ್ರಯೋಜವಾಗಲಿಲ್ಲ. ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗೆ ಇದ್ಯಾ?. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದರೆ ಪ್ರಯೋಜನವಿಲ್ಲ. ಕೇಂದ್ರದಲ್ಲಿ ಪ್ರಶ್ನಿಸಲಾಗದ ನಾಯಕರು ಈಗ ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಲು ಮುಂದಾಗಿರುವುದು ಹಾಸ್ಯಸ್ಪದ ಎಂದು ಸಚಿವರು ತಿಳಿಸಿದರು.

ಬಿಜೆಪಿ ಸರ್ಕಾರ ಕಡೇ ದಿನಗಳಲ್ಲಿ ಮಾಡಿದ ತಪ್ಪಿನಿಂದಾಗಿ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಕ್ಕ ಸಿಕ್ಕಂತೆ ಟೆಂಡರ್ ಮಾಡಿ, ಯಾವುದೇ ಹಣ ಬಿಡುಗಡೆ ಮಾಡದೇ ಹೋದರು. ಇದೀಗ ಹಣ ಬಿಡುಗಡೆ ಮಾಡಿ ಅಂತ ನಮ್ಮನ್ನು ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಕಷ್ಟಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ ಎಂದು ದೂರಿದರು.

ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ
ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿರುವ ಪಕ್ಷ. ಸರ್ವಜನಾಂಗಕ್ಕೂ ಬೇಕಾಗಿರುವ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗೃಹಲಕ್ಷ್ಮಿ ಹಣ ಬಿಡುಗಡೆ
ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವೂ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಜೊತೆಗೆ ಫೆಬ್ರವರಿ ತಿಂಗಳ ಹಣ ಕೂಡ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫೆಬ್ರವರಿ ತಿಂಗಳ ಹಣ ಸಂದಾಯವಾಗಲಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

11 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

11 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

11 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

12 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

12 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

12 hours ago