ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.
ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ, ಹಾಲಿನ ದರ ಏರಿಸಿರುವುದರಿಂದ ರೈತರಿಗೆ ಅನುಕೂಲ ಆಗಿದೆ ಎಂದು ತಿರುಗೇಟು ನೀಡಿದರು.
ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿದ್ದಾರೆ, ರಾಜ್ಯಕ್ಕೆ ನ್ಯಾಯಕೊಡಿಸಲಿ. ನಮ್ಮ ಹಕ್ಕು ನಮ್ಮ ತೆರಿಗೆ ಅಂತ ಹೋರಾಟ ಮಾಡಿದರೂ ಪ್ರಯೋಜವಾಗಲಿಲ್ಲ. ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗೆ ಇದ್ಯಾ?. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದರೆ ಪ್ರಯೋಜನವಿಲ್ಲ. ಕೇಂದ್ರದಲ್ಲಿ ಪ್ರಶ್ನಿಸಲಾಗದ ನಾಯಕರು ಈಗ ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಲು ಮುಂದಾಗಿರುವುದು ಹಾಸ್ಯಸ್ಪದ ಎಂದು ಸಚಿವರು ತಿಳಿಸಿದರು.
ಬಿಜೆಪಿ ಸರ್ಕಾರ ಕಡೇ ದಿನಗಳಲ್ಲಿ ಮಾಡಿದ ತಪ್ಪಿನಿಂದಾಗಿ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಕ್ಕ ಸಿಕ್ಕಂತೆ ಟೆಂಡರ್ ಮಾಡಿ, ಯಾವುದೇ ಹಣ ಬಿಡುಗಡೆ ಮಾಡದೇ ಹೋದರು. ಇದೀಗ ಹಣ ಬಿಡುಗಡೆ ಮಾಡಿ ಅಂತ ನಮ್ಮನ್ನು ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಕಷ್ಟಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ ಎಂದು ದೂರಿದರು.
ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ
ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿರುವ ಪಕ್ಷ. ಸರ್ವಜನಾಂಗಕ್ಕೂ ಬೇಕಾಗಿರುವ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗೃಹಲಕ್ಷ್ಮಿ ಹಣ ಬಿಡುಗಡೆ
ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವೂ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಜೊತೆಗೆ ಫೆಬ್ರವರಿ ತಿಂಗಳ ಹಣ ಕೂಡ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫೆಬ್ರವರಿ ತಿಂಗಳ ಹಣ ಸಂದಾಯವಾಗಲಿದೆ ಎಂದು ಹೇಳಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…