ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ತನ್ನ ಎಕ್ಸ್ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್ ಮಾಡುವುದೇ ಕಾಂಗ್ರೆಸ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, ಈಗಾಗಲೇ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ್ದು, ಇದರ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದೆ.
ಜೊತೆಗೆ ದೈನಂದಿನ ಖರ್ಚಿಗೂ ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿ ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸ್ಪಷ್ಟ ನಿದರ್ಶನವಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕ ಬರ್ಬಾದ್ ಆಗಿದೆ ಎಂಬುದನ್ನು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಬಿಜೆಪಿ ಘಟಕ ಕಿಡಿಕಾರಿದೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…